ಮೈಸೂರು : ಎಲೆಕ್ಟ್ರಿಕ್ ಸ್ಕೂಟರ್ ನಿಂದ ಹೊತ್ತಿಕೊಂಡ ಬೆಂಕಿಗೆ ಇಡೀ ಮನೆಯೇ ಸುಟ್ಟು ಕರಕಲಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಈ ದುರ್ಘಟನೆ ಕುಂಬಾರಕೊಪ್ಪಲಿನ ಸ್ಮಶಾನ ರಸ್ತೆಯ ಬಳಿ ಸಂಭವಿಸಿದೆ.
ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಗುಂಡಪ್ಪಗೌಡರು ತಮ್ಮ ಎಲೆಕ್ಟ್ರಿಕ್ ಬೈಕ್ ಅನ್ನು ಚಾರ್ಜ್ಗೆ ಹಾಕಿ ಮಲಗಿದ್ರು. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಇದ್ರಿಂದ ಬೆಂಕಿ ಅವರ ಮನೆಗೂ ಹೊತ್ತಿಕೊಂಡಿದೆ.
ಅಷ್ಟೇ ಅಲ್ಲದೆ ಬೆಂಕಿ ಪಕ್ಕದಲ್ಲೇ ನಿಲ್ಲಿಸಿದ್ದ ಕಾರಿಗೂ ತಗುಲಿದ್ದು, ಮನೆಯ ಪೀಠೋಪಕರಣ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಕೌಟುಂಬಿಕ ಕಲಹ – ಕೆ.ಆರ್.ಪುರಂನಲ್ಲಿ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಯತ್ನಿಸಿದ ತಾಯಿ..!
Post Views: 226