ಹುಬ್ಬಳ್ಳಿ : ಲೋಕಸಭೆ ಎಲೆಕ್ಷನ್ ಹೊತ್ತಲ್ಲಿ ಜೆಡಿಎಸ್ಗೆ ಬಿಗ್ ಶಾಕ್ ಎದುರಾಗಿದೆ. ಲೋಕ ಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಇಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜೆಡಿಎಸ್ಗೆ ರಾಜೀನಾಮೆ ನೀಡಿದ ಬಳಿಕ ಮರಿತಿಬ್ನೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಅಧಿಕೃತವಾದ ಮಾಹಿತಿ ಇನ್ನು ಹೊರಬಂದಿಲ್ಲ
ಇದನ್ನೂ ಓದಿ : ಟ್ರಾಫಿಕ್ ಕಾನ್ಸ್ಟೇಬಲ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹ*ಲ್ಲೆ ನಡೆಸಿದ ಬೈಕ್ ಸವಾರ : FIR ದಾಖಲು..!
Post Views: 34