ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಇದೀಗ ರಾಜ್ಯದಲ್ಲಿ ಝಣ ಝಣ ಕಾಂಚಾಣದ ಸದ್ದು ಜೋರಾಗಿದೆ. ದಾಖಲೆಯಿಲ್ಲದೇ ಕೋಟಿ ಕೋಟಿ ಹಣವನ್ನ ಸಾಗಿಸುತ್ತಿರುವುದು ಹೆಚ್ಚಾಗಿದೆ. ಹಾಗಾಗಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಹಗಲು-ರಾತ್ರಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಅದರಂತೆಯೇ ಇದೀಗ ಚಿಕ್ಕಬಳ್ಳಾಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸುಲ್ತಾನ್ ಪೇಟೆ ಬಳಿ ಇರುವ ಚೆಕ್ಪೋಸ್ಟ್ನಲ್ಲಿ ಹಣ ವಶಕ್ಕೆ ಪಡೆಯಲಾಗಿದೆ. 5 ಲಕ್ಷ ಹಣವನ್ನ ಇನೋವಾ ಕಾರ್ನಲ್ಲಿ ಸಾಗಣೆ ಮಾಡುತ್ತಿದ್ದರು. ಈ ವೇಳೆ ಸಂಚಾರಿ ಠಾಣೆಯ PSI ಮಂಜುಳಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಈ ಹಣ ಚಿಕ್ಕಬಳ್ಳಾಪುರ ನಗರದ ಗಿರೀಶ್ ಎಂಬುವರಿಗೆ ಸೇರಿದ್ದಾಗಿದ್ದು, ದಾಖಲೆಯಿಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಎಲೆಕ್ಷನ್ ಹೊತ್ತಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ರಿಂದ ಟೆಂಪಲ್ ರನ್..!