ಕೋಲಾರ : ಲೋಕಸಭೆ ಚುನಾವಣಾ ಸಮೀಪಿಸುತ್ತಿದ್ದಂತೆ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಮಹಾ ಸ್ಫೋಟ ಸಂಭವಿಸಿದೆ. ಟಿಕೆಟ್ ಹಂಚಿಕೆ ಮುನ್ನವೇ ಕೋಲಾರ ಕಾಂಗ್ರೆಸ್ನಲ್ಲಿ ಅತೃಪ್ತಿಯ ಬಿರುಗಾಳಿ ಎದ್ದಿದ್ದು, ಮುನಿಯಪ್ಪ-ರಮೇಶ್ಕುಮಾರ್ ಬಣದ ಮಧ್ಯೆ ಟಿಕೆಟ್ ಫೈಟ್ ನಡೆದಿದೆ. ಮುನಿಯಪ್ಪ ಅಳಿಯನಿಗೆ ಟಿಕೆಟ್ಕೊಡ್ತಿರೋದಕ್ಕೆ ಆಕ್ರೋಶ ಭುಗಿಲೆದ್ದಿದೆ.
ಈ ಕಾರಣಕ್ಕಾಗಿ ಕಾಂಗ್ರೆಸ್ನ ಇಬ್ಬರು ಎಂಎಲ್ಸಿ ನಜೀರ್ ಅಹ್ಮದ್ ಮತ್ತು ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇಬ್ಬರು MLCಗಳು ಸಭಾಪತಿ ಬಸವರಾಜ ಹೊರಟ್ಟಿಗೆ ರಾಜೀನಾಮೆ ಪತ್ರ ಸಲ್ಲಿದ್ದಾರೆ. ಸಚಿವ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡ್ತಿರೋದಕ್ಕೆ ವಿರೋಧ ವ್ಯಕ್ತವಾಗಿದೆ.
ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಿಕ್ಕಟ್ಟು ತಾರಕಕ್ಕೇರಿದ್ದು, ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದನ್ನು ಖಂಡಿಸಿ ಕೋಲಾರ ಭಾಗದ ಸಚಿವರು ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಈಗ MLC ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ನಜೀರ್ ಅಹ್ಮದ್ ನಿರ್ಧಾರ ಮಾಡಿದ್ದಾರೆ. ಕೋಲಾರ ಬಣ ರಾಜಕೀಯ ತಡೆಯುವಲ್ಲಿ ಸಿಎಂ, ಡಿಸಿಎಂ ವಿಫಲರಾಗಿದ್ದಾರೆ. ಕೋಲಾರ ನಾಯಕರ ಪ್ರತಿಷ್ಠೆ ಮುಂದೆ ಸ್ವತಃ ಸಿಎಂ, ಡಿಸಿಎಂ ಫೇಲ್ ಆಗಿದ್ದಾರೆ. ಸಿಎಂ ಅತ್ಯಾಪ್ತರಾಗಿರುವ ಬಹುತೇಕ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಅಜ್ಜಿ-ಮೊಮ್ಮಗಳಿಗೆ ಫ್ರೀ, ಜತೆಗಿದ್ದ ನಾಲ್ಕು ಹಕ್ಕಿಗೆ 444 ರೂ.ಟಿಕೆಟ್..!