ಮಂಡ್ಯ : ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಹೈ ಟೆನ್ಷನ್ ವಿದ್ಯುತ್ ಕಂಬ ಉರುಳಿಬಿದ್ದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಬಳಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಸುರೇಶ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರ ಮಂಡ್ಯದಿಂದ ಮೈಸೂರು ಕಡೆಗೆ ತೆರಳುತ್ತಿದ್ದ, ಈ ವೇಳೆ ಹೈಟೆನ್ಷನ್ ವಿದ್ಯುತ್ ಕಂಬ ಇದ್ದಕ್ಕಿದ್ದಂತೆ ಉರುಳಿಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸರ್ವಿಸ್ ರಸ್ತೆಗೆ ಬೃಹತ್ ಕಂಬ ಬೀಳುತ್ತಿದ್ದಂತೆ ವಾಹನಗಳು ಮುಂದೆ ಚಲಿಸದೇ ರಸ್ತೆಗೆ ನಿಂತವೆ. ಕಿಮೀಟರ್ ಉದ್ದಕ್ಕೂ ವಾಹನಗಳು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು ಕಂಬ ಬಿದ್ದ ರಭಸಕ್ಕೆ ಬೈಕ್ ಜಖಂಗೊಂಡಿದೆ.
ಇದನ್ನೂ ಓದಿ : ನಾನೂ ರಾಮಮಂದಿರಕ್ಕೆ ಹೋಗ್ತೇನೆ.. ಆದ್ರೆ ಜ.22ಕ್ಕೆ ಹೋಗಲ್ಲ, ಪುರುಸೊತ್ತು ಸಿಕ್ದಾಗ ಹೋಗ್ತೇನೆ : ಸಿಎಂ ಸಿದ್ದರಾಮಯ್ಯ..!
Post Views: 274