Download Our App

Follow us

Home » ರಾಜ್ಯ » ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಶಾರ್ಟ್ ಸರ್ಕ್ಯೂಟ್​ನಿಂದ ಧಗಧಗನೆ ಹೊತ್ತಿ ಉರಿದ ಗುಜರಿ ಅಂಗಡಿ..!

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಶಾರ್ಟ್ ಸರ್ಕ್ಯೂಟ್​ನಿಂದ ಧಗಧಗನೆ ಹೊತ್ತಿ ಉರಿದ ಗುಜರಿ ಅಂಗಡಿ..!

ಬೆಂಗಳೂರು : ಬೆಳಗಿನ ಜಾವ ಗುಜುರಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ವಸ್ತುಗಳೆಲ್ಲ ಸುಟ್ಟು ಕರಕಲಾಗಿರುವ ಘಟನೆ ನಗರದ ನಾಯಂಡಹಳ್ಳಿ ಬಳಿಯ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಗಂಗೊಂಡನಹಳ್ಳಿಯಲ್ಲಿನ ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗ ಹೊತ್ತಿ ಉರಿದಿದೆ. ಇದರಿಂದಾಗಿ ದಟ್ಟ ಹೊಗೆ ಆರಿಸಿದ್ದರಿಂದ ಸುತ್ತಲಿನ ಜನರೆಲ್ಲ ಭಯಭೀತರಾಗಿದ್ದರು. ತಕ್ಷಣ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳ ಸಮೇತ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗುಜುರಿ ಅಂಗಡಿಯಲ್ಲಿದ್ದ ವೆಸ್ಟೇಜ್ ಎಲ್ಲವೂ ಬೆಂಕಿಗೆ ಆಹುತಿಯಾಗಿವೆ. ಆದರೆ ಇಂತಹ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

ಇದನ್ನೂ ಓದಿ : ಫೆ.14 ಪ್ರೇಮಿಗಳ ದಿನದಂದು ಬೆಂಗಳೂರಿನಲ್ಲಿ ಮದ್ಯ ಬ್ಯಾನ್ – ಬಾರ್ ಅಸೋಸಿಯೇಷನ್​​ನಿಂದ ತೀವ್ರ ವಿರೋಧ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here