Download Our App

Follow us

Home » ಅಪರಾಧ » ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣಹ*ತ್ಯೆ ಆರೋಪ – ಪ್ರಕರಣ ದಾಖಲು..!

ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣಹ*ತ್ಯೆ ಆರೋಪ – ಪ್ರಕರಣ ದಾಖಲು..!

ನೆಲಮಂಗಲ : ಭ್ರೂಣ ಹತ್ಯೆ ತಡೆ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ ನಾನಾ ಕಸರತ್ತು ನಡೆಸುತ್ತಿದೆ. ಇದರ ನಡುವೆ ಈಗ ನೆಲಮಂಗಲ ನಗರದ ಆಸರೆ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಭ್ರೂಣ ಲಿಂಗ ಪತ್ತೆ, ಭ್ರೂಣ ಹತ್ಯೆ ನಿಷೇಧವಿದ್ದರೂ ಯಾವ ಕಾನೂನನ್ನೂ ಪಾಲಿಸದೆ ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ. ಇನ್ನು ಈ ಹಿನ್ನೆಲೆ ಕೇಸ್ ದಾಖಲಾಗುತ್ತಿದ್ದಂತೆ ಆಸ್ಪತ್ರೆ ವೈದ್ಯ ಡಾ.ರವಿಕುಮಾರ್ ನಾಪತ್ತೆಯಾಗಿದ್ದಾರೆ. ಹಾಗೂ ಸಿಬ್ಬಂದಿಗಳು ಸಹ ಪರಾರಿಯಾಗಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿಗಳು ಪರಿಶೀಲನೆ ವೇಳೆ ಅನುಮಾನ ಬಂದು ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೋಟಿಸ್ ನೀಡಿದೆ. 60 ಅಬಾರ್ಷನ್​, 32 ಬೇರೆ ಪ್ರಕರಣಗಳಲ್ಲಿ ದಾಖಲೆ ನೀಡದ ಆರೋಪ ಕೂಡ ಕೇಳಿಬಂದಿದ್ದು, ವೈದ್ಯರು ಸ್ಕ್ಯಾನಿಂಗ್​ ಮಷಿನ್​​ ಇಲ್ಲದೇ ಆಸ್ಪತ್ರೆ ನಡೆಸುತ್ತಿದ್ದರು ಎನ್ನಲಾಗಿದೆ.

ಸದ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಆಸರೆ ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಟೌನ್ ಠಾಣೆಯಲ್ಲಿ ಡಾ.ರವಿಕುಮಾರ್ ವಿರುದ್ಧ ಮೊಕದ್ದಮೆ ಹೂಡಿ ತನಿಖೆ ನಡೆಸಲಾಗುತ್ತಿದೆ. ನೆ

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬಾಂಬರ್​ನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ NIA..

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here