Download Our App

Follow us

Home » ಜಿಲ್ಲೆ » ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ – ಬೆಸ್ಕಾಂನ ಮೂವರು ಸಿಬ್ಬಂದಿಗಳು ಸ್ಥಳದಲ್ಲೇ ಸಾ*ವು…!

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ – ಬೆಸ್ಕಾಂನ ಮೂವರು ಸಿಬ್ಬಂದಿಗಳು ಸ್ಥಳದಲ್ಲೇ ಸಾ*ವು…!

ಚಿಕ್ಕಬಳ್ಳಾಪುರ : ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ವಾಟದಹೊಸಹಳ್ಳಿ ತಿರುವಿನ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂನ ಮೂವರು ಸಿಬ್ಬಂದಿಗಳು ​ಮೃತಪಟ್ಟಿದ್ದಾರೆ.

ಬೆಸ್ಕಾಂನ ಸಿಬ್ಬಂದಿ ಶಿವು (34)  ಶ್ರೀಧರ್ ನಾಯ್ಕ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜುನಾಥ್ (35) ಮೃತ ದುರ್ದೈವಿಗಳು. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ. ತೀವ್ರಗಾಯಗೊಂಡಿದ್ದ ಆತನನ್ನು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಪಾರ್ಟಿ ಮುಗಿಸಿಕೊಂಡು ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ವಾಟದಹೊಸಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಯಲ್ಲಿ ಉರುಳಿ ಬಿದ್ದಿದೆ. ಮದ್ಯಸೇವನೆ ಹಾಗೂ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಕಳೆದ ರಾತ್ರಿಯೇ ಅಪಘಾತ ಸಂಭವಿಸಿದ್ದು, ಮುಂಜಾನೆ ವೇಳೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್​ ದಾಖಲಿಸಲಾಗಿದೆ.

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here