ಚಿತ್ರದುರ್ಗ : ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಈಗಾಗಲೇ 13 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ.
ಚಿತ್ರದುರ್ಗದ ಡಿವೈಸಿಪಿ ಕಚೇರಿಗೆ ತಾವಾಗಿಯೇ ಬಂದು ಜಗ್ಗು ಹಾಗೂ ಅನುಕುಮಾರ್ ಎಂಬುವವರು ಪೊಲೀಸರಿಗೆ ಶರಣಾಗಿದ್ದಾರೆ. ಇದೀಗ ಕೊಲೆ ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳಲ್ಲಿ 16 ಮಂದಿನ್ನು ಅರೆಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನ ಬೆಂಗಳೂರಿಗೆ ಕರೆತಂದವರಲ್ಲಿ ರಾಜು ಎಂಬಾತನ ಸುಳಿವು ಇನ್ನೂ ಸಿಕ್ಕಿಲ್ಲ.
ಶರಣಾಗಿರುವ ಆರೋಪಿಗಳಾದ ಜಗ್ಗು ಹಾಗೂ ಅನುಕುಮಾರ್ನ್ನು ಅರೆಸ್ಟ್ ಮಾಡಿ ಇದೀಗ ಬೆಂಗಳೂರಿಗೆ ಕರೆತರಲಾಗುತ್ತಿದೆ.
ಇದನ್ನೂ ಓದಿ : ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್..!
Post Views: 190