Download Our App

Follow us

Home » ಅಪರಾಧ » ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ACP ಜೀಪ್ ಡ್ರೈವರ್ ಹಾಗೂ ಹೆಡ್​ ಕಾನ್ಸ್‌ಟೇಬಲ್..!

ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ACP ಜೀಪ್ ಡ್ರೈವರ್ ಹಾಗೂ ಹೆಡ್​ ಕಾನ್ಸ್‌ಟೇಬಲ್..!

ಬೆಂಗಳೂರು : ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಲಂಚ ಪಡೆಯುವಾಗ ಎಸಿಪಿ ಜೀಪ್ ಡ್ರೈವರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯ ಎಸಿಪಿ ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಗಂಗಹನುಮಯ್ಯ 50 ಸಾವಿರ ಹಣ ಪಡೆಯುವಾಗ ರೆಡ್​ಹ್ಯಾಂಡ್ ಲಾಕ್ ಆಗಿದ್ದಾರೆ.

ಚೇತನ್ ಎಂಬಾತ ಕೊಟ್ಟ ದೂರಿನ ಮೇಲೆ ಟ್ರ್ಯಾಪ್ ಮಾಡಲಾಗಿದ್ದು, ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲು ಅನುಮತಿ ನೀಡಲು ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಗಂಗಹನುಮಯ್ಯ ಎರಡು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಳಿಕ 50 ಸಾವಿರ ಹಣ ಅಡ್ವಾನ್ಸ್​ ಪಡೆಯುವಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಎಸಿಪಿ ಜೀಪ್ ಡ್ರೈವರ್ ನಾಗರಾಜ್
ಎಸಿಪಿ ಜೀಪ್ ಡ್ರೈವರ್ ನಾಗರಾಜ್

ಆರ್ ಎಂ ಸಿ ಯಾರ್ಡ್ ನಲ್ಲಿರುವ ಎಸಿಪಿ ಕಚೇರಿಯಲ್ಲಿ ಮುಂಗಡವಾಗಿ 50 ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ವಿಜಯ ಕೃಷ್ಣ ಮತ್ತು ತಂಡ ಕಾರ್ಯಾಚರಣೆ ನಡೆಸಿದ್ದು, ಸದ್ಯ ಇಬ್ಬರನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆಡ್ ಕಾನ್ಸ್‌ಟೇಬಲ್ ಗಂಗಹನುಮಯ್ಯ
ಹೆಡ್ ಕಾನ್ಸ್‌ಟೇಬಲ್ ಗಂಗಹನುಮಯ್ಯ

ಇದನ್ನೂ ಓದಿ : ಬಿಎಂಟಿಸಿ ಬಸ್​ನಲ್ಲಿ ಮಹಿಳೆ ಮೇಲೆ ಹ*ಲ್ಲೆ ಮಾಡಿದ ಕಂಡಕ್ಟರ್ ಸೇವೆಯಿಂದ ಅಮಾನತು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here