Download Our App

Follow us

Home » ಸಿನಿಮಾ » ನಟ ರಮೇಶ್ ಅರವಿಂದ್​​ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’..!

ನಟ ರಮೇಶ್ ಅರವಿಂದ್​​ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’..!

ನಟ ರಮೇಶ್ ಅರವಿಂದ್ ಅವರಿಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ ಶ್ರೀ ಸುಬುಧೇಂದ್ರತೀರ್ಥರ ಸಾನಿಧ್ಯದಲ್ಲಿ  ನೀಡುವ ಮಂತ್ರಾಲಯ ಪರಿಮಳ ಪ್ರಶಸ್ತಿ ಒಲಿದು ಬಂದಿದೆ. ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ “ಮರಳಿ ಸಂಸ್ಕೃತಿಗೆ” ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಅವರಿಗೆ ‘ ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಯಿತು.

ಈ ಹಿಂದೆ “ಮಂತ್ರಾಲಯ ಪರಿಮಳ ಪ್ರಶಸ್ತಿ” ಯನ್ನು ಡಾ||ರಾಜಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ದರ್ಶನ್ ಅವರಿಗೆ ನೀಡಲಾಗಿತ್ತು. ಈ ಬಾರಿ ಮಂತ್ರಾಲಯ ಪರಿಮಳ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ನೀಡಿ ಗೌರವಿಸಲಾಗಿದೆ.

ಕನ್ನಡದಲ್ಲಿ ನೂರಾರು ಸಿನಿಮಾಗಳನ್ನು ಮಾಡಿರುವ ರಮೇಶ್ ಅರವಿಂದ್ ಅವರಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಸಂದಿವೆ. ಇದೇ ಮೊದಲ ಬಾರಿಗೆ ಮಂತ್ರಾಲಯದ ಪರಿಮಳ ಪ್ರಶಸ್ತಿ ಅವರಿಗೆ ಸಂದಿದೆ.

ಇದನ್ನೂ ಓದಿ : ಕೋಲಾರ ಮೈತ್ರಿ ಟಿಕೆಟ್​ ಜೆಡಿಎಸ್​ ಪಾಲು : ಜೆಡಿಎಸ್​ನಿಂದ ಮಲ್ಲೇಶ್​ ಬಾಬುಗೆ ಟಿಕೆಟ್​ ಬಹುತೇಕ ಫೈನಲ್..! – BTV Kannada

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here