ನಟ ರಮೇಶ್ ಅರವಿಂದ್ ಅವರಿಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ ಶ್ರೀ ಸುಬುಧೇಂದ್ರತೀರ್ಥರ ಸಾನಿಧ್ಯದಲ್ಲಿ ನೀಡುವ ಮಂತ್ರಾಲಯ ಪರಿಮಳ ಪ್ರಶಸ್ತಿ ಒಲಿದು ಬಂದಿದೆ. ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ “ಮರಳಿ ಸಂಸ್ಕೃತಿಗೆ” ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಅವರಿಗೆ ‘ ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಯಿತು.
ಈ ಹಿಂದೆ “ಮಂತ್ರಾಲಯ ಪರಿಮಳ ಪ್ರಶಸ್ತಿ” ಯನ್ನು ಡಾ||ರಾಜಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ದರ್ಶನ್ ಅವರಿಗೆ ನೀಡಲಾಗಿತ್ತು. ಈ ಬಾರಿ ಮಂತ್ರಾಲಯ ಪರಿಮಳ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ನೀಡಿ ಗೌರವಿಸಲಾಗಿದೆ.
ಕನ್ನಡದಲ್ಲಿ ನೂರಾರು ಸಿನಿಮಾಗಳನ್ನು ಮಾಡಿರುವ ರಮೇಶ್ ಅರವಿಂದ್ ಅವರಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಸಂದಿವೆ. ಇದೇ ಮೊದಲ ಬಾರಿಗೆ ಮಂತ್ರಾಲಯದ ಪರಿಮಳ ಪ್ರಶಸ್ತಿ ಅವರಿಗೆ ಸಂದಿದೆ.
ಇದನ್ನೂ ಓದಿ : ಕೋಲಾರ ಮೈತ್ರಿ ಟಿಕೆಟ್ ಜೆಡಿಎಸ್ ಪಾಲು : ಜೆಡಿಎಸ್ನಿಂದ ಮಲ್ಲೇಶ್ ಬಾಬುಗೆ ಟಿಕೆಟ್ ಬಹುತೇಕ ಫೈನಲ್..! – BTV Kannada