Download Our App

Follow us

Home » ಸಿನಿಮಾ » ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಿದ ನಟ ಯಶ್..​!

ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಿದ ನಟ ಯಶ್..​!

ಗದಗ : ವಿದ್ಯುತ್​ ಶಾಕ್​​ಗೆ ಬಲಿಯಾಗಿದ್ದ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್​ ತಲಾ 5 ಲಕ್ಷ ನೆರವಿನ ಚೆಕ್​​ ವಿತರಣೆ ಮಾಡಿದ್ದಾರೆ.

ಇಂದು ಯಶ್​ ಸ್ನೇಹಿತರಾದ ಚೇತನ, ರಾಕೇಶ್‌ರಿಂದ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಗದಗದ ಸೂರಣಗಿಯ ನವೀನ, ಮುರಳಿ, ಹನುಮಂತ ಕಟೌಟ್​ ಹಾಕುವ ವೇಳೆ ಕರೆಂಟ್​ ತಗುಲಿ ಸಾವನ್ನಪ್ಪಿದ್ದರು.

ಖುದ್ದು ನಟ ಯಶ್​ ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಗಾಯಾಳುಗಳ ದಾಖಲೆಯನ್ನೂ ಸಂಗ್ರಹಿಸಿ ಸೂಕ್ತ ಪರಿಹಾರವನ್ನು ನೀಡುವುದಾಗಿ ಹೇಳಿದ್ದರು.

BREAKING : ವಿದ್ಯುತ್ ಅವಘಡಕ್ಕೆ ಅಭಿಮಾನಿಗಳು ಬಲಿ : ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ | Kannada Dunia | Kannada News | Karnataka News | India News

ಪ್ರತಿ ವರ್ಷ ಯಶ್ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಈ ಬಾರಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾಗ ದುರ್ಘಟನೆ ನಡೆಯಿತು.

ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ತಗುಲಿದ್ದರಿಂದ ಮುರಳಿ, ನವೀನ್​ ಮತ್ತು ಹನುಮಂತ ಮೃತರಾದರು. ಅಭಿಮಾನಿಗಳ ಸಾವಿನ ಸುದ್ದಿ ತಿಳಿದು ಯಶ್​ ಅವರು ಕಂಬನಿ ಮಿಡಿದರು. ಮರುದಿನ ಅವರು ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಮೃತರ ಮನೆಗಳಿಗೆ ತೆರಳಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು.

ಈ ವೇಳೆ ಅವರಿಗೆ ಪರಿಹಾರ ಹಣದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್​ ತಿಳಿಸಿದ್ದರು. ಈಗ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ : ಪೀಣ್ಯ ಫ್ಲೈಓವರ್ ಮೇಲೆ 30 ಟನ್ ತೂಕದ ಟ್ರಕ್ ಗಳನ್ನ‌ ನಿಲ್ಲಿಸಿ ಲೋಡ್ ಟೆಸ್ಟಿಂಗ್..

 

Leave a Comment

DG Ad

RELATED LATEST NEWS

Top Headlines

ವಾಹನ ಸವಾರರೇ ಹುಷಾರ್… ಇನ್ಮುಂದೆ 130km ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದರೆ ಬೀಳುತ್ತೆ ಎಫ್‌ಐಆರ್‌..!

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂತವರ ವಿರುದ್ಧ FIR ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Live Cricket

Add Your Heading Text Here