Download Our App

Follow us

Home » ಸಿನಿಮಾ » ದರ್ಶನ್ ಅರೆಸ್ಟ್​ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣನಿಗೂ ಶುರುವಾಯ್ತು ಭೀತಿ – ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್..!​

ದರ್ಶನ್ ಅರೆಸ್ಟ್​ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣನಿಗೂ ಶುರುವಾಯ್ತು ಭೀತಿ – ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್..!​

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸಿಲುಕಿ ಕಂಬಿ ಹಿಂದೆ ಬಂಧಿಯಾಗಿದ್ದಾರೆ. ಈ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದು, ದರ್ಶನ್ ಜೊತೆ ಪವಿತ್ರಾಗೌಡ ಸೇರಿ 19 ಮಂದಿಯನ್ನು ಈಗಾಗಲೇ ಅರೆಸ್ಟ್ ಮಾಡಲಾಗಿದೆ. ಇನ್ನು ಈ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ಇದೀಗ ಹಾಸ್ಯನಟ ಚಿಕ್ಕಣ್ಣಗೂ ಕಾಮಾಕ್ಷಿಪಾಳ್ಯ ಪೊಲೀಸರು ನೋಟಿಸ್​ ನೀಡಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಅಷ್ಟಕ್ಕೂ ಚಿಕ್ಕಣ್ಣಗೆ ನೋಟಿಸ್ ಹೋಗಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಟ ದರ್ಶನ್​​ ಶೆಡ್​ಗೆ ಹೋಗುವ ಮೊದಲು ವಿನಯ್ ಒಡೆತನದ ಸ್ಟೋನಿಬ್ರೂಕ್​ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರಂತೆ. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಅಂತಾ ದರ್ಶನ್ ಎದ್ದು ಹೋಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್​ಗೆ ಎಂದು ಹೇಳಲಾಗಿದೆ.

ಇದೀಗ ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾಗಿದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ಪೊಲೀಸರು ನೋಟಿಸ್​ ನೀಡಿದ್ದಾರೆ. ಇಂದೆ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್​ ಜಾರಿ ಮಾಡಿದ್ದಾರೆ. ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್​​ನಲ್ಲಿ ಚರ್ಚೆ ಆಗಿತ್ತಾ? ಎಂಬೆಲ್ಲ ಮಾಹಿತಿಯನ್ನು ಚಿಕ್ಕಣ್ಣನಿಂದ ಪೊಲೀಸರು ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ದರ್ಶನ್​​ನ ಮತ್ತೊಂದು ಕರಾಳ ಮುಖ ಬಯಲು – ರೌಡಿಸಂಗಾಗಿಯೇ ಕಿರಾತಕರ ಗ್ಯಾಂಗ್​ ಇಟ್ಕೊಂಡಿರೊ ನಟ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here