ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸಿಲುಕಿ ಕಂಬಿ ಹಿಂದೆ ಬಂಧಿಯಾಗಿದ್ದಾರೆ. ಈ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದು, ದರ್ಶನ್ ಜೊತೆ ಪವಿತ್ರಾಗೌಡ ಸೇರಿ 19 ಮಂದಿಯನ್ನು ಈಗಾಗಲೇ ಅರೆಸ್ಟ್ ಮಾಡಲಾಗಿದೆ. ಇನ್ನು ಈ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ಇದೀಗ ಹಾಸ್ಯನಟ ಚಿಕ್ಕಣ್ಣಗೂ ಕಾಮಾಕ್ಷಿಪಾಳ್ಯ ಪೊಲೀಸರು ನೋಟಿಸ್ ನೀಡಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಅಷ್ಟಕ್ಕೂ ಚಿಕ್ಕಣ್ಣಗೆ ನೋಟಿಸ್ ಹೋಗಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ನಟ ದರ್ಶನ್ ಶೆಡ್ಗೆ ಹೋಗುವ ಮೊದಲು ವಿನಯ್ ಒಡೆತನದ ಸ್ಟೋನಿಬ್ರೂಕ್ ಪಬ್ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರಂತೆ. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಅಂತಾ ದರ್ಶನ್ ಎದ್ದು ಹೋಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ಗೆ ಎಂದು ಹೇಳಲಾಗಿದೆ.
ಇದೀಗ ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾಗಿದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದೆ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ಜಾರಿ ಮಾಡಿದ್ದಾರೆ. ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ನಲ್ಲಿ ಚರ್ಚೆ ಆಗಿತ್ತಾ? ಎಂಬೆಲ್ಲ ಮಾಹಿತಿಯನ್ನು ಚಿಕ್ಕಣ್ಣನಿಂದ ಪೊಲೀಸರು ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ದರ್ಶನ್ನ ಮತ್ತೊಂದು ಕರಾಳ ಮುಖ ಬಯಲು – ರೌಡಿಸಂಗಾಗಿಯೇ ಕಿರಾತಕರ ಗ್ಯಾಂಗ್ ಇಟ್ಕೊಂಡಿರೊ ನಟ..!