Download Our App

Follow us

Home » ಅಪರಾಧ » ಶಾಸಕರಿಗೆ ಆಮಿಷ ಆರೋಪ : ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR..!

ಶಾಸಕರಿಗೆ ಆಮಿಷ ಆರೋಪ : ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR..!

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.

ಶಾಸಕ ರವಿಕುಮಾರ್ ಗೌಡ ಕೊಟ್ಟ ದೂರಿನ ಮೇಲೆ FIR ದಾಖಲಾಗಿದ್ದು, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಡಾ.ಮಹಾಂತೇಶ್, ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ FIR ದಾಖಲಾಗಿದೆ. IPC ಸೆಕ್ಷನ್ 171E, 506,171ರಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶಾಸಕ ರವಿಕುಮಾರ್ ಗೌಡ ಪೊಲೀಸ್ ಕಮಿಷನರ್​​ಗೆ ದೂರು ನೀಡಿದ್ದು, ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರಿಗೆ ಆಮಿಷವೊಡ್ಡಿದ ಆರೋಪ ಕೇಳಿಬಂದಿದೆ. ಹರಪನಹಳ್ಳಿ ಪಕ್ಷೇತರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿ ಹಲವರಿಗೆ ಆಮಿಷವೊಡ್ಡಿದ್ದಾರೆ. ಅಡ್ಡ ಮತದಾನ ಮಾಡಲು ಹಣದ ಆಮಿಷವೊಡ್ಡಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ರವಿಕುಮಾರ್ ಗೌಡ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ.

ಇದನ್ನೂ ಓದಿ :  ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ವಿಜಯೇಂದ್ರ ಗ್ರೀನ್ ಸಿಗ್ನಲ್..!

Leave a Comment

DG Ad

RELATED LATEST NEWS

Top Headlines

ವ್ಯವಸಾಯದ ಸಮಸ್ಯೆ ಸಾರುವ ‘ಕಬಂಧ’ ಚಿತ್ರಕ್ಕೆ ಹಾರರ್ ಟಚ್..!

ಸತ್ಯನಾಥ್ ನಿರ್ದೇಶನದ ’ಕಬಂಧ’ ಚಿತ್ರ ಕುಂಜಾರ ಫಿಲಂಸ್ ಲಾಂಛನದಲ್ಲಿ ರೆಡಿಯಾಗಿದೆ. ಈ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ರಿಲೀಸ್ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕೆ.ಕಲ್ಯಾಣ್

Live Cricket

Add Your Heading Text Here