Download Our App

Follow us

Home » ಸಿನಿಮಾ » ನಾನೇ ಹೀರೋ, ನಾನು ಕರಾಬು ಎಂದು ದೊಡ್ಮನೆಯಲ್ಲಿ ಅಬ್ಬರಿಸಿದ ರಜತ್..!

ನಾನೇ ಹೀರೋ, ನಾನು ಕರಾಬು ಎಂದು ದೊಡ್ಮನೆಯಲ್ಲಿ ಅಬ್ಬರಿಸಿದ ರಜತ್..!

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ಅವರ ಆರ್ಭಟ ಜೋರಾಗಿದೆ. ಮಾತಿನ ಮೇಲೆ ನಿಗಾ ಇರಲಿ ಎಂದು ರಜತ್​​​ಗೆ ಕಿಚ್ಚ ಸುದೀಪ್ ವಾರ್ನಿಂಗ್ ಕೂಡ ಕೊಟ್ಟಿದ್ದರು. ಆದರೆ, ಈ ಮಾತುಗಳಿಗೆ ರಜತ್ ಬೆಲೆ ಕೊಡದೆ ಮತ್ತೆ ಎಲ್ಲರ ಜೊತೆ ಜಗಳವಾಡುತ್ತಲೇ ಇದ್ದಾರೆ.

ಬಿಗ್‌ ಬಾಸ್‌‌ ಒಂದು ಟಾಸ್ಕ್‌ ನೀಡಿತ್ತು. ಆ ಟಾಸ್ಕ್ ಅಲ್ಲಿ ಗೆದ್ದ ತಂಡ ತಮ್ಮೊಳಗೆ ಚರ್ಚಿಸಿ ಒಬ್ಬರನ್ನು ನೇರವಾಗಿ ನಾಮಿನೇಟ್‌ ಮಾಡಬೇಕಿತ್ತು. ಆಗ ತ್ರಿವಿಕ್ರಮ್‌ ತಂಡ ರಜತ್‌ ಅವರನ್ನು ನೇರವಾಗಿ ನಾಮಿನೇಟ್‌ ಮಾಡಿದೆ.

ಇಲ್ಲಿ ಎಲ್ಲರನ್ನು ವೈಯಕ್ತಿಕವಾಗಿ ಆಡಿ ಎಂದು ಪ್ರವೋಕ್‌ ಮಾಡುತ್ತಾರೆ. ಅವರನ್ನೇ ಅವರು ಮೇಲು ಅಂದುಕೊಂಡಿದ್ದಾರೆ ಎಂದು ತ್ರಿವಿಕ್ರಮ್‌‌ ಕಾರಣ ಕೊಟ್ಟರು. ಅದಕ್ಕೆ ರಜತ್‌ ಅವರು ನಾನೇ ಹೀರೋ, ನಾನೇ ಕರಾಬು, ನಾಮಿನೇಟ್‌ ಮಾಡಿ ಬಿಟ್ರೆ ಚೇಂಜ್‌ ಆಗ್ತೀನಾ ನಾನು? ಬೇರೆಯವರನಾ ಹೀರೋ ಅಂತಿನಾ? ಎಂದು ಅಬ್ಬರಿಸಿದ್ದಾರೆ.

ಇದನ್ನೂ ಓದಿ : ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ – 6 ತಿಂಗಳ ಬಳಿಕ ಪರಪ್ಪನ ಅಗ್ರಹಾರದಿಂದ ಮುಕ್ತಿ..!

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here