Download Our App

Follow us

Home » ರಾಜಕೀಯ » ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಎಂಟ್ರಿ – ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಪರ ಮತಬೇಟೆ..!

ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಎಂಟ್ರಿ – ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಪರ ಮತಬೇಟೆ..!

ಹುಬ್ಬಳ್ಳಿ : ಲೋಕಸಭೆ ಚುನಾವಣೆಯ ಕಾವು ಈಗ ರಾಜ್ಯದ ‘ಉತ್ತರ’ ಭಾಗಕ್ಕೆ ಶಿಫ್ಟ್ ಆಗಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯು ಬೃಹತ್‌ ಸಮಾವೇಶಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ರೂಪಿಸುತ್ತಿದೆ. ಒಂದೆರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಉತ್ತರಕ್ಕೆ ಭೇಟಿ ನೀಡಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದರು.

ಇದೀಗ ಮೋದಿ ಭೇಟಿ ಬೆನ್ನಲ್ಲೇ ಇಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಉತ್ತರಕ್ಕೆ ಎಂಟ್ರಿಕೊಟ್ಟು, ಕೇಸರಿ ಅಭ್ಯರ್ಥಿಗಳಾದ ಪ್ರಹ್ಲಾದ್​ ಜೋಶಿ, ಬಸವರಾಜ ಬೊಮ್ಮಾಯಿ ಪರ ಮತಶಿಕಾರಿ ನಡಸಲಿದ್ದಾರೆ.

ಮೊದಲಿಗೆ ಹಾವೇರಿ ಕ್ಷೇತ್ರದಲ್ಲಿ ಅಮಿತ್​ ಶಾ ರೋಡ್ ಶೋ ನಡೆಸಲಿಸಿದ್ದು, ಬಳಿಕ ರಾಣೆ ಬೆನ್ನೂರಿನಲ್ಲಿ ಹಾವೇರಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡಲಿದ್ದಾರೆ. ಹಾವೇರಿ ಕ್ಷೇತ್ರದ ನಂತರ ಅಮಿತ್ ಶಾ ಸಂಜೆ 5.45ಕ್ಕೆ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಲ್ಹಾದ್ ಜೋಶಿ ಪರ ಮತಬೇಟೆ ನಡೆಸಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ರಾತ್ರಿ 7:30ಕ್ಕೆ ಅಮಿತ್​ ಶಾ ಹೈದರಾಬಾದ್​ಗೆ ತೆರಳಲಿದ್ದಾರೆ. ಇದಕ್ಕೂ ಮುನ್ನ ನೇಹಾ ಕುಟುಂಬಸ್ಥರನ್ನ ಅಮಿತ್​ ಶಾ ಭೇಟಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಪೆನ್​ಡ್ರೈವ್ ರಿಲೀಸ್ ಮಾಡೋ ಚಿಲ್ಲರೆ ಕೆಲಸ ನಮ್ಮದಲ್ಲ – HDK ಆರೋಪಕ್ಕೆ ಡಿಕೆಶಿ ತಿರುಗೇಟು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here