Download Our App

Follow us

Home » ಅಪರಾಧ » ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ‌ ಪ್ರಕರಣ : ಇನ್ಸ್​ಪೆಕ್ಟರ್ ಅಂಬರೀಶ್​ಗೆ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ..!

ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ‌ ಪ್ರಕರಣ : ಇನ್ಸ್​ಪೆಕ್ಟರ್ ಅಂಬರೀಶ್​ಗೆ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ..!

ಬೆಂಗಳೂರು : ಆರೋಪಿಯನ್ನು 9 ದಿನಗಳ ಕಾಲ ಅಕ್ರಮವಾಗಿ ‌ಬಂಧನದಲ್ಲಿಟ್ಟುಕೊಂಡಿದ್ದ ಆರೋಪದಡಿ ಅಮೃತಹಳ್ಳಿ ಠಾಣೆ ಮೇಲೆ  ಮಾನವಹಕ್ಕುಗಳ ಆಯೋಗ ದಾಳಿ‌ ಮಾಡಿತ್ತು. ಈ ಪ್ರಕರಣ ಸಂಬಂಧ ಪೊಲೀಸ್ ಇನ್ಸ್​ಪೆಕ್ಟರ್ ಅಂಬರೀಶ್​ಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಮಾನವ ಹಕ್ಕು ಆಯೋಗ ಸೂಚನೆ ನೀಡಿದೆ.

DySP ಸುಧೀರ್ ಹೆಗ್ಡೆಯವರು ಇನ್ಸ್‌ಪೆಕ್ಟರ್ ಅಂಬರೀಶ್ ಅವರನ್ನು ವಿಚಾರಣೆ ಮಾಡಲಿದ್ದಾರೆ. ಸ್ಟೇಷನ್ ಡೈರಿ, ಸಿಸಿಟಿವಿ ವಿಶ್ಯುವಲ್ಸ್ ಸಮೇತ ಬರಲು ಸೂಚನೆ ನೀಡಿದ್ದು, ಇನ್ಸ್‌ಪೆಕ್ಟರ್ ಅಂಬರೀಶ್ ಅವರ ವಿಚಾರಣೆ ಬಳಿಕ ಮತ್ತಷ್ಟು ಜನರ ವಿಚಾರಣೆ ನಡೆಯಲಿದೆ. ಸಂಪೂರ್ಣ ಮಾಹಿತಿಯೊಂದಿಗೆ ವಿಚಾರಣೆಗೆ ಹಾಜರಾಗಲು ಮಾನವ ಹಕ್ಕು ಆಯೋಗ ಸೂಚನೆ ನೀಡಿದೆ.

ಪ್ರಕರಣ : ಆರೋಪಿಯೊಬ್ಬನನ್ನು ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಆರೋಪದಡಿ ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳ ತಂಡ ಶನಿವಾರ ದಾಳಿ ನಡೆಸಿದೆ. ಯಾಸಿನ್ ಮೆಹಬೂಬ್​ ಖಾನ್​​ನ್ನು ಇನ್ಸ್​ಪೆಕ್ಟರ್​​ ಅಂಬರೀಶ್​ ಸೂಚನೆ ಮೇರೆಗೆ ಕರೆತಂದಿದ್ದ ಆರೋಪ ಕೇಳಿಬಂದಿದೆ. 9 ದಿನಗಳ ಕಾಲ ಇನ್ಸ್​ಪೆಕ್ಟರ್ ಅಂಬರೀಶ್ ಅಕ್ರಮವಾಗಿ ‌ಬಂಧನದಲ್ಲಿರಿಸಿದ್ದರು.

ಆರೋಪಿಯನ್ನು ಬಂಧಿಸಲು ಕ್ರೈಂ ಕಾನ್​​ಸ್ಟೇಬಲ್​ಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಮುಂಬೈಗೆ ಹೋಗಿದ್ರು. ಕಾನ್​​ಸ್ಟೇಬಲ್​​ಗಳು ರೂಲ್ಸ್ ವೈಲೇಶನ್ ಮಾಡಿ ಅಕ್ರಮ ಬಂಧನದಲ್ಲಿ ಇಟ್ಟಿದ್ದು ಸಾಬೀತಾಗಿತ್ತು. ಇದೇ ಇನ್ಸ್​ಪೆಕ್ಟರ್ ಅಂಬರೀಶ್ ಮೇಲೆ 3 ವರ್ಷಗಳ ಹಿಂದೆಯೊಂದು ಗಂಭೀರ ಆರೋಪವಿತ್ತು.

ಇದನ್ನೂ ಓದಿ : ಡಿಕೆ ಶಿವಕುಮಾರ್ ವಿರುದ್ದ ಆಸ್ತಿ ಗಳಿಕೆ ಕೇಸ್ : ಫೆ. 29ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here