ಹುಬ್ಬಳ್ಳಿ : ನೇಹಾ ಕೊಲೆಯಿಂದ ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿಯಲ್ಲಿ ಮತ್ತೇ ನೆತ್ತರನ್ನು ಹರಿದಿದೆ. ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ವೀರಾಪುರ ಓಣಿಯಲ್ಲಿ ನಡೆದಿದೆ.
ವೀರಾಪುರ ಓಣಿಯ 22 ವರ್ಷದ ಅಂಜಲಿ ಅಂಬಿಗೇರ ಕೊಲೆಯಾದ ಯುವತಿ. ಕೊಲೆ ಮಾಡಿದ ಆರೋಪಿ ಬುಲೆಟ್ ಕಳ್ಳ ವಿಶ್ವನಾಥ್ ಅಂತಾ ತಿಳಿದು ಬಂದಿದೆ. ಕಳೆದ 1 ವರ್ಷದಿಂದ ಇಬ್ಬರು ಕೂಡಾ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಮಾಹಿತಿಯಿದೆ. ಆದ್ರೆ ಕಳೆದ ಒಂದು ವಾರದಿಂದ ಇಬ್ಬರ ನಡುವೆ ಕೆಲವು ವೈಯಕ್ತಿಕ ವಿಚಾರಕ್ಕೆ ಭಿನ್ನಾಭಿಪ್ರಾಯ ಬಂದಿತ್ತು ಎನ್ನಲಾಗುತ್ತಿದೆ. ಇಂದು ಬೆಳಗಿನ ಜಾವ ವಿಶ್ವನಾಥ ಅಂಜಲಿ ವಾಸವಿದ್ದ ಮನೆಗೆ ಬಂದು ಮಲಗಿದ್ದ ಅಂಜಲಿ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ SP ಗೋಪಾಲ್ ಬ್ಯಾಕೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಎಸ್ಕೇಪ್ ಆಗಿರುವ ಕೊಲೆಗಾರ ವಿಶ್ವನಾಥ್ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಂಜಲಿ ಅಂಬಿಗೇರ ಸಾವಿಗೆ ನೈಜ್ಯ ಕಾರಣ ಪತ್ತೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ಇಂದೇ ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ?