ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು!

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿ ಬಳಿ ನಡೆದಿದೆ.

55 ವರ್ಷದ ಅನಿಲ್ ಮೃತಪಟ್ಟ ಬೈಕ್​ ಸವಾರ. ಅನಿಲ್ ಬೈಕ್‌ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದರು. ಈ ವೇಳೆ ಎಲೆಕಲ್ ಘಾಟಿ ಬಳಿ ಹೋಗುವಾಗ ಭಾರೀ ಗಾಳಿ-ಮಳೆಗೆ ಮರ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಮರ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಕೂಡಲೇ ಪೊಲೀಸರು ಹಾಗೂ ಸಾರ್ವಜನಿಕರು ಬಾಳೆಹೊನ್ನೂರು ಆಸ್ಪತ್ರೆಗೆ ಕೊಂಡೊಯ್ದರು.

ಆದರೆ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗಮಧ್ಯೆಯೇ ಅನಿಲ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮುನ್ನ ಸಿಡಿಲು ಬಡಿದು ಇಬ್ಬರು ಹಾಗೂ ಮರಬಿದ್ದು ಓರ್ವ ಸಾವನ್ನಪ್ಪಿದ್ದರು. ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ಕನೇ ಜೀವ ಬಲಿಯಾದಂತಾಗಿದೆ.

ಇದನ್ನೂ ಓದಿ : ಲೋಕಾ ಹೆಸರಲ್ಲಿ ಕೋಟಿ ಕೋಟಿ ವಸೂಲಿ – ನಿಂಗಪ್ಪ ಅರೆಸ್ಟ್​​ ಆಗ್ತಿದ್ದಂತೆ ಲೋಕಾ ವಸೂಲಿಯ 3 ಸ್ಫೋಟಕ ದಾಖಲೆ ಬಯಲು!

Btv Kannada
Author: Btv Kannada

Read More