ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ ಪ್ರಕರಣ -​ ತನಿಖೆಗೆ ಹೈಕೋರ್ಟ್ ತಡೆ!

ಬೆಂಗಳೂರು : ಲೋಕಾಯುಕ್ತ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಂದ ಕೋಟಿ ಕೋಟಿ ಹಣ ವಸೂಲಿ ಮಾಡಿರುವ ಪ್ರಕರಣದಲ್ಲಿ ನಿವೃತ್ತ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ಅರೆಸ್ಟ್ ಆಗಿದ್ದ. ಇದೀಗ ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. 

ಬಂಧನಕ್ಕೊಳಗಾಗಿರುವ ಆರೋಪಿ ನಿಂಗಪ್ಪ ಪ್ರಕರಣಕ್ಕೆ ತಡೆ ಕೋರಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದ. ಹಾಗಾಗಿ ಈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ತಡೆಯಾಜ್ಞೆ ತೆರವಿಗೆ ಲೋಕಾಯುಕ್ತ ಎಸ್​ಪಿಪಿ ಮನವಿ ಮಾಡಿದ್ದಾರೆ. ಈ ಸಂಬಂಧ ಸೂಕ್ತ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.

ಪ್ರಕರಣದಲ್ಲಿ ಲೋಕಾಯುಕ್ತ ಎಸ್​ಪಿ 1 ಶ್ರೀನಾಥ್ ಜೋಶಿ ವಿರುದ್ದ ಆರೋಪ ಇತ್ತು. ಹಾಗಾಗಿ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಸದ್ಯ ಹೈಕೋರ್ಟ್​ ಈ ಪ್ರಕರಣಕ್ಕೆ ತಡೆ ನೀಡಿದೆ.

ಇದನ್ನೂ ಓದಿ : ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ ‘ಉಸಿರು’ ಚಿತ್ರದ ಟೀಸರ್ ರಿಲೀಸ್!

Btv Kannada
Author: Btv Kannada

Read More