ಬೆಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ಸಿಲುಕಿ ಕನ್ನಡಿಗರು ಪರಿತಪಿಸುತ್ತಾ ಇದ್ದರು. ಕೊನೆಗೂ ಇಸ್ರೇಲ್ನಲ್ಲಿರುವ ಕನ್ನಡಿಗರು ಇಂದು ತಮ್ಮ ತಾಯ್ನಾಡಿಗೆ ಸೇಫ್ ಆಗಿ ಮರಳಿದ್ದಾರೆ. ಇರಾನ್ ಮತ್ತು ಇಸ್ರೇಲ್ ನಡುವಿನ ತೀವ್ರಗೊಂಡ ಯುದ್ಧದಿಂದಾಗಿ ಇಸ್ರೇಲ್ನ ಟೆಲ್ ಅವೀವ್ನಲ್ಲಿ ಕಳೆದ ಆರು ದಿನಗಳಿಂದ ಸಿಲುಕಿದ್ದ 18 ಕನ್ನಡಿಗರ ತಂಡ ಇಂದು ಬೆಳಗ್ಗೆ ಮುಂಬೈಗೆ ಬಂದಿಳಿದೆ.
18 ಕನ್ನಡಿಗರ ತಂಡ ಬೆಳಗ್ಗೆಯ ಪ್ಲೈಟ್ ಕ್ಯಾನ್ಸಲ್ ಆದ ಹಿನ್ನೆಲೆ ಮುಂಬೈನಿಂದ ಮಧ್ಯಾಹ್ನ 3:30ರ ವಿಮಾನದಲ್ಲಿ ಬೆಂಗಳೂರಿನ ಪ್ರಯಾಣ ಬೆಳೆಸಿ ಸಂಜೆ 5 ಗಂಟೆಗೆ ಸುಮಾರಿಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.
ಅಧ್ಯಯನ ಪ್ರವಾಸಕ್ಕಾಗಿ ಇಸ್ರೇಲ್ಗೆ ತೆರಳಿದ್ದ ಬಿಪ್ಯಾಕ್ (B-PAC) ಸಂಸ್ಥೆಯ 18 ಕನ್ನಡಿಗರ ನಿಯೋಗ, ಯುದ್ಧದ ಆತಂಕದ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ಭಾರತೀಯ ರಾಯಭಾರ ಕಚೇರಿ ಮತ್ತು ಇಸ್ರೇಲ್ ಸರ್ಕಾರದ ಸಹಕಾರದಿಂದ ಈ ತಂಡವನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ಸಿಲುಕಿಕೊಂಡು ಕನ್ನಡಿಗರು ಆತಂಕದಲ್ಲಿದ್ದರು. ತಮ್ಮ ತಾಯ್ನಾಡಿಗೆ ಮರಳಲು ಸಾಧ್ಯವಾ? ಎಂದು ಚಿಂತೆಗೀಡಾಗಿದ್ದರು. ಇದೀಗ ಅವರನ್ನು ಸೇಫ್ ಆಗಿ ತಾಯ್ನಾಡಿಗೆ ಕರೆತರುವಲ್ಲಿ ಯಶಸ್ಸು ಸಾಧಿಸಲಾಗಿದೆ.
ಇದನ್ನೂ ಓದಿ : ಮಂಗಳೂರು ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ – ಬಜ್ಪೆ ಠಾಣೆ ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ 56 ಸಿಬ್ಬಂದಿ ವರ್ಗಾವಣೆ!
