ʻಕರ್ಣʼ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಖತ್ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದು ಸರ್ಪ್ರೈಸ್ ಎಂಬಂತೆ ವಾಹಿನಿ ಭವ್ಯ ಗೌಡ -ಕಿರಣ್ ರಾಜ್ ಹಾಡನ್ನು ಬಿಟ್ಟಿದ್ದು ಇವರಿಬ್ಬರ ಕೆಮಿಸ್ಟ್ರಿ ಪ್ರೇಕ್ಷಕರ ಮನದಲ್ಲಿ ಕಚಗುಳಿ ಎಬ್ಬಿಸಿದೆ. ಅಷ್ಟೇ ಅಲ್ಲದೇ ಪ್ರೊಮೊ ಮತ್ತು ಹಾಡು ಎರಡೂ ಸಖತ್ ಆಗಿ ಮೂಡಿ ಬಂದಿದ್ದು ಧಾರಾವಾಹಿಯನ್ನು ನೋಡಲು ಜನರು ಹಾತೊರೆಯುತ್ತಿದ್ದಾರೆ.
ಕರ್ಣ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದು ಅಲ್ಲದೇ ಕಾಮೆಂಟ್ ಸೆಕ್ಷನ್ಗಳು ಪಾಸಿಟಿವ್ ಕಾಮೆಂಟ್ಗಳಿಂದ ತುಂಬಿವೆ. ಈ ಧಾರಾವಾಹಿಯಲ್ಲಿ ಹಿರಿಯ ನಟರಾದ ಅಶೋಕ್, ನಾಗಾಭರಣ ಸೇರಿ ಹಲವಾರು ದಿಗ್ಗಜರು ಅಭಿನಯಿಸಿದ್ದಾರೆ.
ಅನಾಥವಾಗಿ ಬಿದ್ದಿದ್ದ ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಅಷ್ಟೇ ಅಲ್ಲದೇ ಯಾವ ತಾಯಿಯು ಮಗುವನ್ನು ಕಳೆದುಕೊಳ್ಳಬಾರದು ಮತ್ತು ಯಾವ ಮಗುವು ಅಮ್ಮನಿಲ್ಲದ ತಬ್ಬಲಿಯಾಗಬಾರದು ಎಂಬುದು ಇವನ ಸಿದ್ದಾಂತ. ಸದಾ ಬಡವರ ಸೇವೆಗೆ ತುಡಿಯುವ ಈ ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ಮನೆಯಲ್ಲಿ ಸಿಕ್ಕಿದ್ದು ಮಾತ್ರ ತಿರಸ್ಕಾರ. ಎಲ್ಲಾ ಆಸ್ತಿಯೂ ತನ್ನ ಹೆಸರಿನಲ್ಲೇ ಇದ್ದರೂ ಕರ್ಣ ಬಯಸುತ್ತಿರುವುದು ಮಾತ್ರ ಅಪ್ಪನ ಪ್ರೀತಿ, ಮಾಯೆಯವರ ವಾತ್ಸಲ್ಯದ ಅಪ್ಪುಗೆ. ಅಜ್ಜಿ ಬಿಟ್ಟು ಮನೆಯಲ್ಲಿರೋ ಎಲ್ಲರಿಗೂ ಕರ್ನನ್ನು ಕಂಡ್ರೆ ಅಷ್ಟಕಷ್ಟೇ. ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ನಿಷ್ಕಲ್ಮಶ ಪ್ರೀತಿ, ಅಪ್ಪನ ಪ್ರೀತಿ, ಮನೆಯವರ ಒಪ್ಪಿಗೆಯ ಅಪ್ಪುಗೆ ಸಿಗುತ್ತಾ? ತಿಳ್ಕೊಳೋಕೆ ವೀಕ್ಷಿಸಿ ಕರ್ಣ ಇದೇ ಜುಲೈ 03 ರಿಂದ ರಾತ್ರಿ 8 ಗಂಟೆಗೆ.
ಇದನ್ನೂ ಓದಿ : ಮಾಜಿ ಸಚಿವ ಈಶ್ವರಪ್ಪ ಕುಟುಂಬಕ್ಕೆ ‘ಲೋಕಾ’ ಶಾಕ್ – ಕೋರ್ಟ್ ಸೂಚನೆಯಂತೆ ಈಶ್ವರಪ್ಪ, ಮಗ-ಸೊಸೆ ವಿರುದ್ಧ FIR!







