KSRTC ಬಸ್​​​ಗೆ ಹಿಂಬದಿಯಿಂದ ಬೈಕ್​​​​​​ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು!

ಬೆಂಗಳೂರು : KSRTC ಬಸ್​​​ಗೆ ಹಿಂಬದಿಯಿಂದ ಬೈಕ್​​​​​​ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಮೊಹಮ್ಮದ್ ಅಜರ್ ಮೃತ ಯುವಕ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, ಯುವಕನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ಲವ್, ಸೆಕ್ಸ್, ದೋಖಾ ಕೇಸ್ – ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ ಪೊಲೀಸರ ಬಲೆಗೆ!

Btv Kannada
Author: Btv Kannada

Read More