ಡೆತ್​​ ನೋಟ್ ಬರೆದಿಟ್ಟು ಲಾಡ್ಜ್​​ನಲ್ಲಿ ಸಬ್​ ಇನ್ಸ್​ಪೆಕ್ಟರ್ ಆತ್ಮಹತ್ಯೆ!

ತುಮಕೂರು : ನಗರದ ದ್ವಾರಕಾ ಹೋಟೆಲ್ ​ಲಾಡ್ಜ್​​​ನಲ್ಲಿ ಪೊಲೀಸ್ ಸಬ್​ ಇನ್ಸ್​ಪೆಕ್ಟರ್ ನಾಗರಾಜಪ್ಪ ಬಿ.ಆರ್ ನೇಣಿಗೆ ಶರಣಾಗಿದ್ದಾರೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ನಾಗರಾಜಪ್ಪ ಬಿ.ಆರ್ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಜುಲೈ 1ರಂದು ಇನ್ಸ್​ಪೆಕ್ಟರ್ ನಾಗರಾಜಪ್ಪ ತುಮಕೂರು ನಗರದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್​​​ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಂ​ ಬಾಡಿಗೆ ಪಡೆದುಕೊಂಡಿದ್ದು, ಅಲ್ಲೇ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದೆ. ಬಳಿಕ ಲಾಡ್ಜ್ ಸಿಬ್ಬಂದಿ ಹೋಗಿ ನೋಡಿದಾಗ ಇನ್ಸ್ ಪೆಕ್ಟರ್​ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇನ್ಸ್​ಪೆಕ್ಟರ್ ನಾಗರಾಜಪ್ಪ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್​ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಇನ್ನು ಕುಟುಂಬದ ಹಲವು ಸಮಸ್ಯೆಗಳ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಬಾಂಡ್ ಪೇಪರ್​​ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೊಬೈಲ್ ಸೇರಿ ಡೆತ್ ನೋಟ್, ಬಾಂಡ್ ಪೇಪರ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಭೀಕರ ಅಪಘಾತ – ಡಿಕ್ಕಿಯ ರಭಸಕ್ಕೆ ಟೆಂಪೋ ಎರಡು ಪೀಸ್, ಮೂವರಿಗೆ ಗಂಭೀರ ಗಾಯ!

Btv Kannada
Author: Btv Kannada

Read More