ಮೈಸೂರಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರ ಸಭೆ – ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ!

ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಇಂದು ಮೈಸೂರಿನಲ್ಲಿ ಆಯೋಜಿಸಿದ್ದ ಪಕ್ಷದ ಮೈಸೂರು ವಿಭಾಗದ ಪ್ರಮುಖರ ಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಮುಂದಿನ ದಿನಗಳಲ್ಲಿ ಸಂಘಟನಾ ಶಕ್ತಿ ಬಲ ವೃದ್ಧಿಗೊಳಿಸುವ ಕುರಿತು ಕಾರ್ಯಕರ್ತರು ಹಾಗೂ ಪ್ರಮುಖರು ಸಮನ್ವಯತೆ ಹಾಗೂ ಒಗ್ಗಟ್ಟಿನಿಂದ ಕಾರ್ಯಚಟುವಟಿಕೆಗಳನ್ನು ನಡೆಸಬೇಕೆಂಬ ಮನವಿ ಮಾಡಲಾಯಿತು.

ಅಲ್ಲದೆ ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ, ಜನವಿರೋಧಿ ಹಾಗೂ ಅಭಿವೃದ್ಧಿ ವಿರೋಧಿ ಆಡಳಿತದಿಂದ ಜನರ ವಿಶ್ವಾಸ ಕಳೆದುಕೊಂಡಿದ್ದು, ಈ ನಿಟ್ಟಿನಲ್ಲಿ ಜನರ ದನಿಯಾಗಿ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕೆಂದು ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಎನ್.ಮಹೇಶ್, ಅಪ್ಪಚ್ಚು ರಂಜನ್, ಶಾಸಕರಾದ ಟಿ.ಎಸ್.ಶ್ರೀವತ್ಸ, ರಾಜ್ಯ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ಮಾಜಿ ಸಂಸದರಾದ ಪ್ರತಾಪ್ ಸಿಂಹ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯ, ಅಲ್ಪಸಂಖ್ಯಾತರ ಮೋರ್ಚಾ ರಾಜ್ಯಾಧ್ಯಕ್ಷರಾದ ಅನಿಲ್ ಥಾಮಸ್, ರಾಜ್ಯ ಕಾರ್ಯದರ್ಶಿಗಳಾದ ಲಕ್ಷ್ಮಿ ಅಶ್ವಿನ್ ಗೌಡ, ಶರಣು ತಳ್ಳೀಕೆರೆ, ಮಾಜಿ ಶಾಸಕರು ಹಾಗೂ ನಗರ ಜಿಲ್ಲಾಧ್ಯಕ್ಷರಾದ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷರಾದ ಕುಂಬ್ರಳ್ಳಿ ಸುಬ್ಬಣ್ಣ, ರವಿ ಕಾಳಪ್ಪ, ಶ್ರೀಡಾ.ಇಂದ್ರೇಶ್, ಸಿದ್ದೇಶ್ ನಾಗೇಂದ್ರ, ಮಾಜಿ ಶಾಸಕರಾದ ನಿರಂಜನ್ ಕುಮಾರ್, ಡಾ.ಹರ್ಷವರ್ಧನ್, ಶ್ರೀ ಬಸವರಾಜು, ಮುಖಂಡರಾದ ಎಸ್ ಬಾಲರಾಜ್, ಫಣೀಶ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ತುಮಕೂರು : ಚಾಕುವಿನಿಂದ ಚುಚ್ಚಿ ಪತ್ನಿಯನ್ನೇ ಭೀಕರವಾಗಿ ಕೊಲೆಗೈದ ಪತಿ!

Btv Kannada
Author: Btv Kannada

Read More