ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್​.. ಮತ್ತೆರಡು ಜೀವ ಬಲಿ ಪಡೆದ ವಿಸಿ ನಾಲೆ!

ಮಂಡ್ಯ : ಸಕ್ಕರೆನಾಡು ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಹೊಸಗಾವಿ ಬಳಿ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬೈಕ್ ಬಿದ್ದು ಇಬ್ಬರು ಜೀವ ಕಳೆದುಕೊಂಡಿದ್ದು, ತುಮಕೂರು ಮೂಲದ ರಾಮಣ್ಣ ( 70), ಮದ್ದೂರಿನ ಸೋಮಹಳ್ಳಿ ಗ್ರಾಮದ ಭರತ್ (19) ಮೃತ ಬೈಕ್ ಸವಾರರು ಎಂದು ಗುರುತಿಸಲಾಗಿದೆ.

ಇವರಿಬ್ಬರು ಬೈಕ್​ನಲ್ಲಿ ಸೋಮನಹಳ್ಳಿಯಿಂದ ಶಿವಪುರಕ್ಕೆ ಹೋಗುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರಣ ಸವಾರರು ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಸಿ ನಾಲೆಯ ತಡೆಗೆ ಡಿಕ್ಕಿ ಹೊಡೆದು ಸವಾರರು ಬಿದ್ದಿದ್ದಾರೆ. ನಾಲೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ನೀರನ್ನು ನಿಲ್ಲಿಸಲಾಗಿತ್ತು. ಹೀಗಾಗಿ ಬೈಕ್​ನಿಂದ ಕಾಲುವೆ ಬಿದ್ದಿದ್ದರಿಂದ ದೇಹಕ್ಕೆ ಬಲವಾದ ಪೆಟ್ಟುಗಳು ತಗುಲಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಸಿಲಿಕಾನ ಸಿಟಿ ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ – ನಿತಿನ್​​​ ಗಡ್ಕರಿ!

Btv Kannada
Author: Btv Kannada

Read More