ಹಾವೇರಿ : ದನದ ಕೊಟ್ಟಿಗೆಗೆ ಬೆಂಕಿಬಿದ್ದು 6 ಹಸುಗಳು ಹಾಗೂ 2 ಕರುಗಳು ಸಜೀವ ದಹನವಾಗಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ನಡೆದಿದೆ.
ಸುಮಾರು 6 ಲಕ್ಷಕ್ಕೂ ಹೆಚ್ಚು ಮೌಲ್ಯದ ಹಸು, ಕರು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : http://ಮೊನಾಲಿಸಾಗೆ ವಜ್ರದ ಹಾರ.. ‘ಬಲಿ ಕಾ ಬಕ್ರಾ’ ಮಾಡ್ತಿದ್ದಾರೆ ಎಂದ ನೆಟ್ಟಿಗರು!

Author: Btv Kannada
Post Views: 263