ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು!

ಬೆಂಗಳೂರು : ಮಾಜಿ ಸಚಿವ, ಬೀದರ್‌ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ. ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ನೊಂದ ಯುವತಿಯೊಬ್ಬಳು ದೂರು ನೀಡಿದ್ದು, ಪ್ರತೀಕ್ ಚೌಹಾಣ್ ಮದುವೆಯಾಗೋದಾಗಿ ನಂಬಿಸಿ, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ ಅಂತ ಆರೋಪಿಸಿದ್ದಾಳೆ. ಅಲ್ಲದೇ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರೆ, ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆರೋಪ ಮಾಡಿದ್ದಾಳೆ.

ಲೈಂಗಿಕವಾಗಿ ಬಳಕೆ – ದೂರಿನಲ್ಲಿ ಏನಿದೆ? ಮಹಿಳಾ ಆಯೋಗಕ್ಕೆ ಪ್ರತೀಕ್ ಚೌಹಾಣ್ ವಿರುದ್ಧ ದೂರು ಸಲ್ಲಿಕೆಯಾಗಿದ್ದು, ಮದುವೆ ಯಾಗೋದಾಗಿ ನಂಬಿಸಿ ಮೋಸ ಮಾಡಿದ್ದು, ಲೈಂಗಿಕವಾಗಿಯೂ ಬಳಸಿಕೊಂಡಿದ್ದಾಗಿ ಯುವತಿ ಆರೋಪಿಸಿದ್ದಾರೆ. ಮನೆಯವರೆಲ್ಲ ಸೇರಿ 2023ರ ಡಿಸೆಂಬರ್‌ 25ರಂದು ನಿಶ್ಚಿತಾರ್ಥ ಮಾಡಿದ್ದರು. ಎರಡೂ ಕುಟುಂಬಸ್ಥರು ಒಪ್ಪಿ ಪ್ರತೀಕ್‌ ನಿವಾಸದಲ್ಲೇ ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಪ್ರತಿಕ್ ಜೊತೆ ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಿಕೊಟ್ಟಿದ್ದರು. ಅದರಂತೆ ಪ್ರತೀಕ್‌ 2025ರ ಮಾರ್ಚ್‌ 7, 24, 27, ಏಪ್ರಿಲ್‌ 8ರಂದು ಮಹಾರಾಷ್ಟ್ರದ ಲಾತೂರ್‌ಗೆ ನನ್ನನ್ನ ಕರೆದುಕೊಂಡು ಹೋಗಿದ್ದರು. ಆ ಸಂದರ್ಭದಲ್ಲೇ ಲೈಂಗಿಕ ಕ್ರಿಯೆ ನಡೆಸಿದ್ರೆ ತಪ್ಪಿಲ್ಲ ಅಂತ ಪ್ರತೀಕ್‌ ಒತ್ತಾಯಿಸಿದ್ರೂ, ಅದಾದ್ಮೇಲೆ ನಾನೂ ಸಹಕರಿಸಿದೆ.

ಅಲ್ಲದೇ, 2024ರ ಮೇ 13ರಂದು ವಿಮಾನದಲ್ಲಿ ಶಿರಡಿಗೆ ಹೋಗಿದ್ದೆವು. ನಾಲ್ವರು ಜೊತೆಗೆ ಹೋಗಿದ್ದೆವು, ಅಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಾನು ಪ್ರತೀಕ್‌ ಒಂದೇ ರೂಮಿನಲ್ಲಿ ತಂಗಿದ್ದೆವು. ಆಗಲೂ ಪ್ರತೀಕ್ ಲೈಂಗಿಕ ಸಂಪರ್ಕ ಮಾಡಿದ್ದಾನೆ. ನಂತರ ಮದುವೆಗೆ ಒತ್ತಾಯ ಮಾಡಿದ್ರೆ ಮುಂದೂಡುತ್ತಲೇ ಬಂದಿದ್ದ. ನನ್ನ ಕನ್ಯತ್ವದ ಬಗ್ಗೆಯೂ ಪ್ರಶ್ನೆ ಮಾಡಿದ್ದಾನೆ.

ಈ ಬಗ್ಗೆ ಪ್ರಸಕ್ತ ಜುಲೈ 5ರಂದು ನನ್ನ ಪೋಷಕರು ಪ್ರತೀಕ್‌ ಮನೆಗೆ ಭೇಟಿ ಕೊಟ್ಟು ಪ್ರಶ್ನೆ ಮಾಡಿದ್ದಾರೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ನಮ್ಮನ್ನ ಬಡವರು ಅಂತ ಹೀಯಾಳಿದ್ದಾರೆ. ಈ ಬಗ್ಗೆ ಇದೇ ಜುಲೈ 6ರಂದು ಔರಾದ್‌ನ ಹೋಕ್ರಾನ್‌ ಠಾಣೆಗೆ ದೂರು ಕೊಡಲು ಹೋಗಿದ್ದೆವು. ಆದ್ರೆ ಅವರು ಸ್ವೀಕರಿಸಲಿಲ್ಲ. ಅವರು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಹೀಗಾಗಿ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದೇವೆ. ಮಹಿಳಾ ಆಯೋಗ ಏನೋ ಕ್ರಮ ಕೈಗೊಳ್ಳುತ್ತಾರೆ ನೋಡುತ್ತೇವೆ, ನಮಗೆ ನ್ಯಾಯ ಬೇಕು ಅಂತ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : `ರೂಂ ಮಾಡ್ತೀನಿ ಬಾ’ ಎಂದ ಕಾಮುಕ – ಬಸ್​​ ನಿಲ್ದಾಣದಲ್ಲೇ ಮಹಿಳೆಯಿಂದ ಬಿತ್ತು ಚಪ್ಪಲಿ ಏಟು!

Btv Kannada
Author: Btv Kannada

Read More