ರೇಣುಕಾಸ್ವಾಮಿ ಕೊಲೆ ಕೇಸ್ – ಆರೋಪಿ ದರ್ಶನ್ ಮೈಸೂರಿಗೆ ತೆರಳಲು ಕೋರ್ಟ್ ಅನುಮತಿ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಸೇರಿದಂತೆ ಇನ್ನುಳಿದವರು ಕೂಡ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಕೋರ್ಟ್​ ಅನುಮತಿಯಿಲ್ಲದೆ ದರ್ಶನ್ ಬೆಂಗಳೂರು ಬಿಟ್ಟು ಹೋಗುವಂತಿಲ್ಲ, ಹಾಗಾಗಿ ಆರೋಪಿ ದರ್ಶನ್ ಮೂರು ದಿನಗಳ ಕಾಲ ವೈದ್ಯರ ಭೇಟಿಗೆ ಮೈಸೂರಿಗೆ ತೆರಳಲು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿ ದರ್ಶನ್ ಅರ್ಜಿ ಪುರಸ್ಕರಿಸಿ ಕೋರ್ಟ್ ಮೈಸೂರಿಗೆ ಹೋಗಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಿಚಾರಣೆಯನ್ನು ನ್ಯಾಯಾಲಯ ಫೆ. 25ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಆರೋಪ ಇತ್ತು. ಆತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡಿ ಸಾಯಿಸಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್​ನಲ್ಲಿ ಜಾಮೀನು ಸಿಕ್ಕಿತ್ತು. 

ಇದನ್ನೂ ಓದಿ : http://ಎಲ್ಲರನ್ನೂ ಮುನ್ನಡೆಸೋ ಲೀಡರ್​ ಬೇಕು.. ವಿಜಯೇಂದ್ರ ಬದಲಿಸದಿದ್ರೆ ಉಳಿಗಾಲವಿಲ್ಲ – ಬಿಜೆಪಿ ‘ಹೈ’ ನೋಟಿಸ್​ಗೆ ಶಾಸಕ ಯತ್ನಾಳ್​ ಉತ್ತರ!

Btv Kannada
Author: Btv Kannada

Read More