ಬೆಂಗಳೂರು : ನೀವೇನಾದ್ರು ಕಂಡ ಕಂಡವರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ರೆ ಸಂಕಷ್ಟ ಫಿಕ್ಸ್. ಯಾಕಂದ್ರೆ ಸುಳ್ಳು ದೂರುಗಳನ್ನು ದಾಖಲಿಸುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಸುಳ್ಳು ಪ್ರಕರಣವನ್ನು ದಾಖಲಿಸುವುದು ಸಹ ಭಾರತೀಯ ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು ಸುಳ್ಳುಕೋರರಿಗೆ ಸಂಕಷ್ಟ ಎದುರಾಗಲಿದೆ.
ರಾಜ್ಯಾದ್ಯಂತ ಪೊಲೀಸರು ನಕಲಿ ದೂರುದಾರರ ಮೇಲೆ ಕ್ರಮ ಕೈಗೊಳ್ಳುತ್ತಿದ್ದು, ಅದರಂತೆ ಬೆಂಗಳೂರು ನಗರದಲ್ಲಿ ಈ ರೀತಿ ಸುಳ್ಳು ಪ್ರಕರಣಗಳನ್ನು ಗುರುತಿಸಿ ಅಂತಹ ದೂರುದಾರರ ಮೇಲೆ ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದಾವೆ ಹೂಡಲಾಗುತ್ತಿದೆ.
ಇದುವರೆಗೆ ಬೆಂಗಳೂರು ನಗರದಲ್ಲಿ ಸುಳ್ಳು ದೂರು ದಾಖಲಿಸಿದ್ದ ಆರು ಪ್ರಕರಣಗಳನ್ನು ಪೊಲೀಸರು ಗುರುತಿಸಿದ್ದು, ಅವುಗಳಲ್ಲಿ ಈಗಾಗಲೇ ಎರಡು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಚಾರಣೆ ಕೈಗೊಂಡು ಶಿಕ್ಷೆ ವಿಧಿಸಲಾಗಿದೆ.
ಯಾರೇ ಆಗ್ಲಿ ಭಿನ್ನಾಭಿಪ್ರಾಯ ಅಥವಾ ಇನ್ಯಾವುದೇ ಕಾರಣಕ್ಕೆ ಕಂಡ ಕಂಡವರ ಮೇಲೆ ಸುಳ್ಳು ದೂರು ದಾಖಲಿಸುವ ಮುನ್ನ ಪರಾಮರ್ಶಿಸಿ.

Author: Btv Kannada
Post Views: 784