ನಟ ದರ್ಶನ್ ಮತ್ತೆ ಜೈಲಿಗೆ – ಫೈವ್​​ ಸ್ಟಾರ್​ ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್.. ಜೈಲಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದ್ದು, ನಟ ದರ್ಶನ್ ಹಾಗೂ ಪವಿತ್ರಾ ಗೌಡ ಇಂದೇ ಸರೆಂಡರ್ ಆಗಬೇಕಿದೆ. ಇಲ್ಲವೇ ತಕ್ಷಣವೇ ಅವರನ್ನು ಬಂಧಿಸಲಾಗುತ್ತೆ. ಹಾಗೆಯೇ ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್​ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ.

ಸದ್ಯ ಡೆವಿಲ್ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಆಗಿದ್ದ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದ್ದು, ಮತ್ತೆ ನಟ ಜೈಲು ಪಾಲಾಗ್ತಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದ್ದು, ಇವರುಗಳು ಕೂಡ ಸೆರವಾಸ ಅನುಭವಿಸಲಿದ್ದಾರೆ.

‘ಹೈಕೋರ್ಟ್ ಆದೇಶದಲ್ಲಿ ದೋಷ’ : ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ಕೆಲ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಲ್ಲಿ ಐಷಾರಾಮಿ ಜೀವನ ನಡೆಸಿದ ದರ್ಶನ್ ಬಗ್ಗೆಯೂ ಸುಪ್ರೀಂ ಕಿಡಿಕಾರಿದ್ದು, ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂ ಹೇಳಿದೆ. ಹಾಗೆಯೇ ಆರೋಪಿಗಳಿಗೆ ಜೈಲಿನಲ್ಲಿ ಫೈವ್​​ ಸ್ಟಾರ್​ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಜೈಲಿಗೆ ಹೋದ ನಂತರ ಆರೋಪಿ ಸಾಮಾನ್ಯ ಕೈದಿಯಂತೆ ಇರಬೇಕು. ಈ ಮುಂಚೆ ದರ್ಶನ್​​ಗೆ ಫೈವ್ ಸ್ಟಾರ್ ಟ್ರೀಟ್‌ಮೆಂಟ್ ಕೊಡಲಾಗಿದೆ. ಇನ್ಮುಂದೆ ಸಾಮಾನ್ಯ ಕೈದಿಯಂತೆ ಇರಬೇಕು.

ರಾಜ್ಯ ಸರ್ಕಾರ ಯಾರಿಗಾದರೂ ಫೈವ್​​ ಸ್ಟಾರ್ ಟ್ರೀಟ್‌ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.

ಇದನ್ನೂ ಓದಿ : ದರ್ಶನ್ ಸೇರಿ 7 ಆರೋಪಿಗಳ ಬೇಲ್ ಕ್ಯಾನ್ಸಲ್ – ಸುಪ್ರೀಂ ಕೋರ್ಟ್​ನಿಂದ ಮಹತ್ವದ ಆದೇಶ.. ‘ದಾಸ’​​ ಮತ್ತೆ ಜೈಲು ಪಾಲು!

Btv Kannada
Author: Btv Kannada

Read More