ಬೆಂಗಳೂರು : ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹಕ್ಕಿಜ್ವರ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಆಂತಕ ಮನೆ ಮಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್ ಜಿಲ್ಲೆಯ ಗಡಿ ತಾಲೂಕುಗಳಲ್ಲಿ ಬಂದ್ ಮಾಡಲಾಗಿದೆ.
ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೇರೆ ರಾಜ್ಯಗಳಿಂದ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಬೀದರ್, ಬೆಳಗಾವಿ, ಬಳ್ಳಾರಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
ಮಹಾರಾಷ್ಟ್ರದಿಂದ ಬರುವ ಕೋಳಿ ಉತ್ಪನ್ನ ಸಾಗಾಟ ನಿರ್ಬಂಧಿಸಲಾಗಿದ್ದು, ಕೋಳಿ ಮಾಂಸ, ಮೊಟ್ಟೆ, ಕೋಳಿಗಳಿಗೆ ಹಾಕುವ ಆಹಾರ ಸಾಗಾಟವನ್ನು ಮಹಾರಾಷ್ಟ್ರದಿಂದ ಬೀದರ್ಗೆ ಸಪ್ಲೈ ಆಗದಂತೆ ಚೆಕ್ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಶುಸಂಗೋಪನೆ ಇಲಾಖೆ ಸಿಬ್ಬಂದಿಯಿಂದ ಎಲ್ಲಾ ತಪಾಸಣೆ ಮಾಡಲಾಗಿದೆ.
ಇದನ್ನೂ ಓದಿ : http://ಆಂಧ್ರ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ – ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್!

Author: Btv Kannada
Post Views: 500