ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ!

ನವದೆಹಲಿ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ.

ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡಿದ್ದಾರೆ.

ಶುಕ್ಲಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಬಳಿಕ, ತಮ್ಮ ತವರು ಲಖನೌಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆಕ್ಸಿಯಂ-4 ಮಿಷನ್‍ಗಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ : ನೆಲಮಂಗಲದಲ್ಲಿ ಹಸುಗಳ ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ದುಷ್ಕರ್ಮಿಗಳು ಅರೆಸ್ಟ್​​!

Btv Kannada
Author: Btv Kannada

Read More