ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ನ್ನು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಈ ಪ್ರಕರಣದಲ್ಲಿ ಬಂಧಿತರಾಗಿ ಈ ಹಿಂದೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್ ರಾಜಾತಿಥ್ಯ ಪಡೆದಿದ್ದರು. ರಾಜ್ಯಾತಿಥ್ಯ ಫೋಟೋ ಕೂಡಾ ವೈರಲ್ ಆಗಿತ್ತು. ಅಷ್ಟೇ ಅಲ್ಲದೆ ದರ್ಶನ್ ಅಭಿಮಾನಿ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದರು. ಈ ಕುರಿತು ಜೈಲಾಧಿಕಾರಿಯ ತಲೆದಂಡ ಕೂಡಾ ಆಗಿತ್ತು. ಹಾಗಾಗಿ ಈ ಬಾರಿ ದರ್ಶನ್ಗೆ ಯಾವ ರಾಜ್ಯಾತಿಥ್ಯ ನೀಡದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿತ್ತು.
ಸದ್ಯ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದ್ದು, ಈಗಾಗ್ಲೇ ಜೈಲಾಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಳ್ತಿದ್ದಾರೆ. ಇಂದು ರಾತ್ರೋರಾತ್ರಿಯೇ ದರ್ಶನ್ನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ – ಯಾರಿಗೆಲ್ಲಾ ಸಿಕ್ತು ಚಾನ್ಸ್?







