ಕೊಪ್ಪಳ : ಟಿಪ್ಪರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. 42 ವರ್ಷದ ಉಮೇಶ್ ಮೃತ ಬಸ್ ಕಂಡಕ್ಟರ್.

ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ಡಿಪೋಗೆ ಸೇರಿದ KSRTC ಬಸ್ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಟಿಪ್ಪರ್ ಲಾರಿ ಯೂಟರ್ನ್ ತೆಗೆದುಕೊಳ್ಳುವಾಗ ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ.

ಬ್ರೇಕ್ ಹಾಕಿದ್ದನ್ನು ಗಮನಿಸದ ಬಸ್ ಚಾಲಕ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮರಿಯಮ್ಮನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಆಕ್ಷೇಪಾರ್ಹ ರೀಲ್ಸ್, ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದರೆ ತಕ್ಷಣವೇ ತೆಗೆದುಹಾಕಿ – ವಕೀಲರಿಗೆ KSBC ಖಡಕ್ ಎಚ್ಚರಿಕೆ!
Author: Btv Kannada
Post Views: 306







