ರಂಜಾನ್‌ಗೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ಕೊಡಿ – ಸಿಎಂಗೆ ಪತ್ರ!

ಬೆಂಗಳೂರು : ರಂಜಾನ್ ಉಪವಾಸ ತೊರೆಯಲು ಅನುಕೂಲ ಆಗುವಂತೆ ರಾಜ್ಯದ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್​ ಅಹ್ಮದ್ ಮತ್ತು ನಜೀರ್​ ಅಹ್ಮದ್​ ಪತ್ರ ಬರೆದಿದ್ದಾರೆ.

ಈಗಾಗಲೇ ತೆಲಂಗಾಣದಲ್ಲಿ ಮುಸ್ಲಿಂ ನೌಕರರ ಕೆಲಸದ ಅವಧಿ ಕಡಿತ ಮಾಡಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಆದೇಶ ನೀಡಿದೆ. ಅದೇರೀತಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಪತ್ರದಲ್ಲಿ ಏನಿದೆ? “ರಂಜಾನ್​ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್​ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡಲಾಗಿದೆ.”

“ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ : http://‘ಅಂದೊಂದಿತ್ತು ಕಾಲ‘ ಚಿತ್ರದ ‘ಮುಂಗಾರು ಮಳೆಯಲ್ಲಿ’ ಹಾಡಿಗೆ ಮೆಚ್ಚುಗೆಯ ಮಹಾಪೂರ!

Btv Kannada
Author: Btv Kannada

Read More