ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ!

ನವದೆಹಲಿ : ವಿಪಕ್ಷಗಳ ವಿರೋಧದ ನಡುವೆ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದಾರೆ.

ಮಸೂದೆ ಮಂಡಿಸಿ ಮಾತನಾಡಿದ ಕಿರಣ್ ರಿಜಿಜು ಅವರು, 1995ರಲ್ಲಿ ಈ ಮಸೂದೆಯನ್ನು ಪರಿಚಯಿಸಿದಾಗ ಯಾರು ವಿರೋಧಿಸಿರಲಿಲ್ಲ. ಈ ಹಿಂದೆಯೂ ಹಲವು ಬಾರಿ ತಿದ್ದುಪಡಿಯಾಗಿದ್ದು, ವಿರೋಧಗಳು ಬಂದಿರಲಿಲ್ಲ. ಈಗ ನಾವು ತಿದ್ದುಪಡಿ ಮಾಡಿದಾಕ್ಷಣ ಅಸಂವಿಧಾನಿಕ ಎಂದು ಅರಚುತ್ತಿದ್ದಾರೆ. ಈ ವಿಚಾರವಾಗಿ 25 ರಾಜ್ಯಗಳ ವಕ್ಫ್ ಬೋರ್ಡ್‌ಗಳ ಅಭಿಪ್ರಾಯ ಕೇಳಲಾಗಿದೆ. ಮಸೂದೆ ಕುರಿತು 96ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಈ ಮಸೂದೆ ಬಗ್ಗೆ ನಡೆದಷ್ಟು ಚರ್ಚೆ ಯಾವುದರಲ್ಲಿಯೂ ನಡೆದಿಲ್ಲ. ಸಂಸದೀಯ ಜಂಟಿ ಸಮಿತಿಯಲ್ಲೂ ವಿಧೇಯಕದ ಬಗ್ಗೆ ಹೆಚ್ಚು ಚರ್ಚೆ ನಡೆದಿದೆ’ ಎಂದು ಹೇಳಿದರು.

 

Btv Kannada
Author: Btv Kannada

Read More