ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ – ದಂಪತಿ ಸ್ಥಳದಲ್ಲೇ ಸಾವು!

ರಾಮನಗರ : ಮೈಸೂರು- ಬೆಂಗಳೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಗಂಡ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ಬಳಿಯ ದೇವರಹೊಸಹಳ್ಳಿ ಬಳಿ ನಡೆದಿದೆ.

ಕೊಡಗು ಮೂಲದ ಸೋಮಯ್ಯ (73) ಹಾಗೂ ಸರಸ್ವತಿ ( 65) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಮಗ ಪವನ್​ಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುಟುಂಬದವರು ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಎಕ್ಸ್​ಪ್ರೆಸ್ ವೇನಲ್ಲಿ ನಿಂತಿದ್ದ ಟ್ರಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

ಈ ಭೀಕರ ಅಪಘಾತದಲ್ಲಿ ಗಂಡ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇವರ ಮಗ ಪವನ್​ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಇದನ್ನೂ ಓದಿ : ಹಾವೇರಿಯಲ್ಲಿ ಪ್ರಿಯಕರನಿಗಾಗಿ ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ! 

Btv Kannada
Author: Btv Kannada

Read More