ರಾಮನಗರ : ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಗಂಡ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ಬಳಿಯ ದೇವರಹೊಸಹಳ್ಳಿ ಬಳಿ ನಡೆದಿದೆ.
ಕೊಡಗು ಮೂಲದ ಸೋಮಯ್ಯ (73) ಹಾಗೂ ಸರಸ್ವತಿ ( 65) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಮಗ ಪವನ್ಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುಟುಂಬದವರು ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಎಕ್ಸ್ಪ್ರೆಸ್ ವೇನಲ್ಲಿ ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

ಈ ಭೀಕರ ಅಪಘಾತದಲ್ಲಿ ಗಂಡ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇವರ ಮಗ ಪವನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಇದನ್ನೂ ಓದಿ : ಹಾವೇರಿಯಲ್ಲಿ ಪ್ರಿಯಕರನಿಗಾಗಿ ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ!
Author: Btv Kannada
Post Views: 434







