ಯುವತಿಗೆ ಬ್ಯಾಡ್ ಟಚ್ – ಮಂಜನನ್ನು ಅರೆಸ್ಟ್ ಮಾಡಿದ ಪೊಲೀಸರು!

ಬೆಂಗಳೂರು : ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದ ಆಸಾಮಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 7ರಂದು ಜಕ್ಕೂರು ಮುಖ್ಯರಸ್ತೆಯಲ್ಲಿ ರಾತ್ರಿ 11.50ಕ್ಕೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಜುನಾಥ್
ಮಂಜುನಾಥ್

ಆಗಿದ್ದೇನು? ಜಕ್ಕೂರು ಮುಖ್ಯರಸ್ತೆಯಲ್ಲಿ ಶ್ವಾನವೊಂದು ಅಪಘಾತಕ್ಕೆ ಒಳಗಾಗಿತ್ತು. ಇದನ್ನು ಗಮನಿಸಿದ ಯುವತಿ, ಕಾರು ನಿಲ್ಲಿಸಿ ಅದರ ರಕ್ಷಣೆಗೆ ಮುಂದಾಗಿದ್ದಳು. ಆ ಬಳಿಕ ಕೈಗೆ ರಕ್ತ ಆಗಿದ್ದರಿಂದ ಪೆಟ್ರೊಲ್ ಬಂಕ್ ಬಳಿ ಕೈತೊಳೆದು ಹೊರ ಬರುತ್ತಿದ್ದಂತೆ ಬೈಕ್​ನಲ್ಲಿ ಬಂದ ಆಸಾಮಿ ಬ್ಯಾಡ್ ಟಚ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ವಲ್ಪ ಹೊತ್ತಿನ ಬಳಿಕ ಎರಡನೇ ಬಾರಿಗೆ ಬಂದು ಯುವತಿ ಖಾಸಗಿ ಅಂಗ ಮುಟ್ಟಿ ಎಸ್ಕೇಪ್​ ಆಗಿದ್ದಾನೆ. ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಳು. ಸದ್ಯ ಆರೋಪಿ ಮಂಜುನಾಥ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ವರನಟ ಡಾ. ರಾಜ್​ಕುಮಾರ್ ಬಗ್ಗೆ ಅವಹೇಳನ – CCB ಪೊಲೀಸರಿಂದ ಆರೋಪಿ ಅರೆಸ್ಟ್​!

Btv Kannada
Author: Btv Kannada

Read More