ಮೈಸೂರು : ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ, ಹಿಂದೆ ಮುಡಾ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶಿಸಿದೆ. ಡಿ.ಬಿ.ನಟೇಶ್ ಮುಡಾ ಆಯುಕ್ತರಾಗಿದ್ದ ಅವಧಿಯ ಅಕ್ರಮಗಳ ತನಿಖೆಗೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ್ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಮುಖ್ಯ ಕಾರ್ಯದರ್ಶಿ ತಿಳಿಸಿದ್ದರು.
2022ರ ಮಾರ್ಚ್ನಲ್ಲಿ ಡಿ.ಬಿ ನಟೇಶ್ ಭೇಟಿಯಾಗಲು ಕಚೇರಿಗೆ ಶ್ರೀನಿವಾಸ್ ಹೋಗಿದ್ದರು. ಕಚೇರಿಯಲ್ಲಿ ಡಿ.ಬಿ ನಟೇಶ್ ಹೇಳಿಕೆಯನ್ನು ಮೊಬೈಲ್ನಲ್ಲಿ ದಾಖಲಿಸಿಕೊಳ್ಳುತ್ತಿದ್ದ ಸಂದರ್ಭ ಮೊಬೈಲ್ನ್ನು ಕಚೇರಿಯಿಂದ ಹೊರ ಹಾಕಿದ್ದರು. ಅಲ್ಲದೆ, ಕಚೇರಿಯಲ್ಲಿದ್ದ ಕೆಲವರು ಶ್ರೀನಿವಾಸ್ನನ್ನು ಎಳೆದಾಡಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದರು.
ಈ ಸಂಬಂಧ ಮೈಸೂರಿನ 8ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಶ್ರೀನಿವಾಸ್ ಪಿಸಿಆರ್ ದೂರು ದಾಖಲಿಸಿದ್ದು, ಇದೀಗ ಪಿಸಿಆರ್ ವಿಚಾರಣೆ ನಡೆಸಿದ ನ್ಯಾಯಾಲಯ ಡಿ.ಬಿ ನಟೇಶ್ ವಿರುದ್ದ FIR ದಾಖಲಿಸಿ ತನಿಖೆ ನಡೆಸಲು ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿದೆ.
ಇದನ್ನೂ ಓದಿ : ಧರ್ಮಸ್ಥಳ ಕೇಸ್ಗೆ ಬಿಗ್ ಟ್ವಿಸ್ಟ್.. ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 100ಕ್ಕೂ ಹೆಚ್ಚು ಮೂಳೆಗಳು ಪತ್ತೆ!







