ಸಚಿವ ಚೆಲುವರಾಯಸ್ವಾಮಿ ಪುತ್ರ ರಾಜಕೀಯಕ್ಕೆ ಅಧಿಕೃತ ಎಂಟ್ರಿ – ಬ್ರಹ್ಮದೇವರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಎಲೆಕ್ಷನ್​ನಲ್ಲಿ ಸ್ಪರ್ಧೆ!

ಬೆಂಗಳೂರು : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರ ಸುಪುತ್ರ ಸಚಿನ್​ ಅವರು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ನಾಗಮಂಗಲ ಜಿಲ್ಲೆಯ ಬ್ರಹ್ಮದೇವರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗಿದ್ದಾರೆ. ಈಗಾಗಲೇ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರೀಯವಾಗಿರುವ ಸಚಿನ್‌, ವಾರದಲ್ಲಿ ಮೂರರಿಂದ ನಾಲ್ಕು ದಿನ ಕ್ಷೇತ್ರದಲ್ಲೇ ಇರುತ್ತಾರೆ. ನಾಗಮಂಗಲದಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆ, ಕಾರ್ಯಕ್ರಮಗಳು, ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿದ್ದಾರೆ. ಮುಂದುವರಿದ ಭಾಗ ಎಂಬಂತೆ ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ನಿಂತಿದ್ದಾರೆ.

ಭವಿಷ್ಯದ ದೃಷ್ಟಿಯಿಂದ ಚೆಲುವರಾಯಸ್ವಾಮಿ ತಮ್ಮ ಮಗನ ರಾಜಕೀಯ ಜೀವನಕ್ಕೆ ಭದ್ರ ಬುನಾದಿ ಹಾಕಲು ಲೋಕಲ್ ಪಾಲಿಟಿಕ್ಸ್‌ಗೆ ಇಳಿಸಿದ್ದಾರೆ ಎಂಬ ಮಾತು ಈಗ ಕೇಳಿ ಬಂದಿದೆ. ಮುಂಬರುವ ವಿಧಾನಸಭಾಕ್ಷೇತ್ರ, ಲೋಕಸಭಾ ಕ್ಷೇತ್ರದ ಚುನಾವಣೆ ಹೊತ್ತಿಗೆ ಪುತ್ರನನ್ನು ಸಂಪೂರ್ಣ ತಯಾರಿ ಮಾಡಲು ಚೆಲುವರಾಯಸ್ವಾಮಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಈಗ ಸಚಿನ್ ಚೆಲುವರಾಯಸ್ವಾಮಿ ಸ್ಪರ್ಧಿಸುತ್ತಿರುವುದು ಪರ, ವಿರೋಧ ಚರ್ಚೆಗೆ ಕಾರಣವಾಗಿದೆ. ಇದು ಕುಟುಂಬ ರಾಜಕೀಯ ಅಲ್ವಾ ಎಂದು ಜೆಡಿಎಸ್ ಕಾರ್ಯಕರ್ತರ ಟೀಕೆ ಮಾಡಿದರೆ.. ದೇವೇಗೌಡರ ಇಡೀ ಕುಟುಂಬ ಎಲ್‌ಎಲ್‌ಎ, ಎಂಪಿ, ಎಂಎಲ್‌ಸಿ ಆಗಬಹದು. ಸಹಕಾರ ಸಂಘದ ಚುನಾವಣೆಯಲ್ಲಿ ಚೆಲುವರಾಯಸ್ವಾಮಿ ಪುತ್ರ  ಸ್ಪರ್ಧಿಸಿದರೆ ತಪ್ಪೇನು ಎಂದು ಕೈ ಕಾರ್ಯಕರ್ತರು ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ : ಚಂಡಮಾರುತ ಎಫೆಕ್ಟ್‌ – ಬೆಂಗಳೂರಿನಲ್ಲಿ ಇನ್ನೂ 2 ದಿನ ಭಾರೀ ಮಳೆ.. ಹವಾಮಾನ ಇಲಾಖೆ ಎಚ್ಚರಿಕೆ!

 

 

Btv Kannada
Author: Btv Kannada

Read More