ರಾಯಚೂರು : ವಿಚಾರಣೆಗೆ ಹಾಜರಾಗಿದ್ದ ವ್ಯಕ್ತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಇದರಿಂದಲೇ ಆತ ಸಾವನ್ನಪ್ಪಿದ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೆಕಾ, ಪಿಎಸ್ಐ ಮಂಜುನಾಥ ಅವರನ್ನು ಎಸ್ಪಿ ಪುಟ್ಟಮಾದಯ್ಯ ಅವರು ಅಮಾನತುಗೊಳಿಸಿ ಆದೇಶಿದ್ದಾರೆ.
ರಾಯಚೂರು ಈಶ್ವರನಗರದ ನಿವಾಸಿ ವಿರೇಶ ಸಾವಿಗೆ ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೇಕಾ ಮತ್ತು ಪಿಎಸ್ಐ ಮಂಜುನಾಥ ಹಲ್ಲೆಯೇ ಕಾರಣ ಎಂದು ಮೃತನ ಸಹೋದರಿ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಅಮಾನತುಗೊಳಿಸಲಾಗಿದೆ.
ಘಟನೆಗೆ ಕಾರಣರಾದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮೃತ ಕುಟುಂದರೊಂದಿಗೆ ಎಸ್ಪಿ ಕಚೇರಿ ಮುಂದೆ ಮಂಗಳವಾರ ರಾತ್ರಿ ಪ್ರತಿಭಟನೆ ಕೂಡ ನಡೆಸಿದ್ದರು. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ಇದೀಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಪಿ ಪುಟ್ಟಮಾದಯ್ಯ ಅವರು, ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೆಕಾ, ಪಿಎಸ್ಐ ಮಂಜುನಾಥ ಅವರನ್ನು ಅಮಾನತುಗೊಳಿಸಿದ್ದಾರೆ.
ಇದನ್ನೂ ಓದಿ : ಐಪಿಎಲ್ ಮ್ಯಾಚ್ ನೋಡುತ್ತಾ ಬೈಕ್ ರೈಡ್.. ಸವಾರನಿಗೆ ದಂಡದ ಬಿಸಿ ಮುಟ್ಟಿಸಿದ ಪೊಲೀಸರು!
