ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ & ಕಿಡ್ನಾಪ್ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನ ಆರೋಪಿ ಆಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತಿನಲ್ಲಿನ ಸಡಿಲಿಕೆ ಕೋರಿ ಸಲ್ಲಿಸಿದ್ದರು. ಇದೀಗ ಭವಾನಿ ರೇವಣ್ಣಗೆ ಹಾಸನ, ಮೈಸೂರು ಜಿಲ್ಲೆ ಪ್ರವೇಶಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡುವ ವೇಳೆ ಮೈಸೂರು, ಹಾಸನ ಪ್ರವೇಶಕ್ಕೆ ಕೋರ್ಟ್ ನಿಷೇಧ ವಿಧಿಸಿತ್ತು. ಈ ಕಂಡಿಷನ್ಸ್ ಸಡಿಲಿಕೆ ಮಾಡುವಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಇನ್ನು ಭವಾನಿ ರೇವಣ್ಣ ಸಂತ್ರಸ್ಥೆ ಮಹಿಳೆಗೆ ಬೆದರಿಕೆ ಹಾಕುವಂತಿಲ್ಲ. ತನಿಖಾಧಿಕಾರಿಗಳ ಮೇಲೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವಂತಿಲ್ಲ. ಒಂದು ವೇಳೆ ಅಂತಹ ವಿಚಾರ ಕಂಡು ಬಂದಲ್ಲಿ ಭವಾನಿ ರೇವಣ್ಣ ಜಾಮೀನು ರದ್ದು ಪಡಿಸುವುದಾಗಿ ಹೈಕೋರ್ಟ್ ಎಚ್ಚರಿಕೆ ಕೊಟ್ಟಿದೆ.

Author: Btv Kannada
Post Views: 849