ಇಂದು ಹೈಕೋರ್ಟ್​ನಲ್ಲಿ ಜಾತಿ ಜನಗಣತಿ ಭವಿಷ್ಯ ನಿರ್ಧಾರ!

ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ  ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದೆ.

ಜಾತಿಗಣತಿ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವೀರಶೈವ ಲಿಂಗಾಯಿತ ಮಹಾಸಭಾ ಸದಸ್ಯರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನಿನ್ನೆ ವಾದ ಪ್ರತಿವಾದ ಆಲಿಸಿದ ಸಿಜೆ ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ವಿಚಾರಣೆಯನ್ನ ಇಂದಿಗೆ ಮುಂದೂಡಿಕೆ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ರೆಡ್ಡಿ, ಅಂಕಿ ಅಂಶ ಸಂಗ್ರಹಕ್ಕೂ ಪ್ರತ್ಯೇಕ ಕಾಯ್ದೆ ಇದೆ. ಆ ಕಾಯ್ದೆಯಲ್ಲಿ ರಾಜ್ಯಕ್ಕೆ ಅಂಕಿ ಅಂಶ ಸಂಗ್ರಹದ ಅಧಿಕಾರ ನೀಡಲಾಗಿಲ್ಲ. ಹಿಂದೆಂದೂ ಇತರೆ ಧರ್ಮದೊಂದಿಗೆ ಜಾತಿಯನ್ನು ಸೇರಿಸಲಾಗಿರಲಿಲ್ಲ ಎಂದು ವಾದ ಮಂಡಿಸಿದ್ದಾರೆ.

ರಾಜ್ಯ ಸರ್ಕಾದ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಇದು ಜಾತಿಗಣತಿಯಲ್ಲ. ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸರ್ವೆ. ಸರ್ಕಾರದ ನೀತಿ ನಿರೂಪಣೆಗೆ ಪೂರಕವಾಗಿ ಸರ್ವೆಯಾಗಿದೆ. ಸಾಮಾಜಿಕ ಕಲ್ಯಾಣ ಕಾರ್ಯಗಳಿಗೆ ಪೂರಕವಾಗಿ ಸರ್ವೆ ನಡೆಸಲಾಗುತ್ತಿದೆ. ಇದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬಾರದೆಂದು ಎಂದು  ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಇಂದು ಕೂಡ ಅರ್ಜಿ ವಿಚಾರಣೆ ಮುಂದುವರೆಯಲಿದ್ದು, ಯಾವ ಆದೇಶ ಹೊರಬೀಳಲಿದೆ ಎಂದು ಕಾದುನೋಡಬೇಕು.

ಇದನ್ನೂ ಓದಿ : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ.. ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ!

Btv Kannada
Author: Btv Kannada

Read More