ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ – ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್​!

ಬೆಂಗಳೂರು : ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೌಡಿಶೀಟರ್ ಬಿಕ್ಲು ಶಿವನ ಬರ್ಬರ ಹತ್ಯೆ ಕೇಸ್ ಆರೋಪಿಗಳಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. 82ನೇ ವಿಶೇಷ ನ್ಯಾಯಾಲಯ ಆರೋಪಿಗಳ ಜಾಮೀನು ರದ್ದು‌ ಮಾಡಿ ಆದೇಶ ಹೊರಡಿಸಿದೆ.

ಆರೋಪಿಗಳಾದ ದಿನೇಶ್, ಮಧನ್, ಪ್ರದೀಪ್, ಶಿವ @ ಆಟೋ ಶಿವ, ಮನೋಜ್, ಅರುಣಕುಮಾರ್​​ನಿಂದ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾಗೊಳಿಸಿದೆ.  ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಹಾಕಿದ್ದ ಹಿನ್ನಲೆ ಕೋರ್ಟ್​ ಜಾಮೀನು ರದ್ದು‌ ಮಾಡಿದೆ.

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್​ ಆರೋಪಿಗಳು ಕೋರಿದ್ದ ಬೇಲ್ ಅರ್ಜಿಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್​​ ಅವರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ – ದೇವಾಲಯದಲ್ಲಿ ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಖತರ್ನಾಕ್ ಖದೀಮರ​​ ಬಂಧನ!

Btv Kannada
Author: Btv Kannada

Read More