ಮಂಗಳೂರು : ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದರು. ಈ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರಿಗೆ ಮಧ್ಯಂತರ ತಡೆ ನೀಡಿದೆ.
ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅಕ್ಟೋಬರ್ 8 ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಹೈಕೋರ್ಟ್ನ ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದಾರೆ.
ಮಹೇಶ್ ತಿಮರೋಡಿ ಗಡಿಪಾರಿಗೆ ತಡೆ ನೀಡಿದ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಅಕ್ಟೋಬರ್ 8ಕ್ಕೆ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ : ಕುತೂಹಲ ಹೆಚ್ಚಿಸಿದ ಕೋಣ ಚಿತ್ರದ ಟ್ರೇಲರ್ – ಹೊಸ ಅವತಾರದಲ್ಲಿ ಸೆನ್ಸೇಷನಲ್ ಸ್ಟಾರ್ ಕೋಮಲ್!
Author: Btv Kannada
Post Views: 314







