ವಿಜಯಪುರ : ಲಾರಿಗೆ KSRTC ಬಸ್​​​​ ಡಿಕ್ಕಿ – ಪ್ರಯಾಣಿಕರಿಗೆ ಗಂಭೀರ ಗಾಯ!

ವಿಜಯಪುರ : ಲಾರಿಗೆ KSRTC ಬಸ್​​​​ ಡಿಕ್ಕಿಯಾದ ಪರಿಣಾಮ ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾದ ಘಟನೆ ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿರುವ NH50ರಲ್ಲಿ ನಡೆದಿದೆ.

ಮೆಕ್ಕೆಜೋಳ ತುಂಬಿಕೊಂಡು ಹೋಗುವ ಲಾರಿಗೆ ಬಸ್​​​ ಡಿಕ್ಕಿಯಾಗಿದ್ದು, ಘಟನಾ ಸ್ಥಳಕ್ಕೆ ದೇವರಹಿಪ್ಪರಗಿ ಪೋಲಿಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ವಿಜಯಪುರ, ಸಿಂದಗಿ, ದೇವರಹಿಪ್ಪರಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಶಾಸಕ ಅಶೋಕ ಮನಗೂಳಿ ಕೂಡಾ ಭೇಟಿ ನೀಡಿದ್ದು, ಈ ಸಂಬಂಧ ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಅನೈತಿಕ ಸಂಬಂಧ : ಲಾಡ್ಜ್​​ನಲ್ಲಿ ಮಹಿಳೆ ಅನುಮಾನಾಸ್ಪದ ಸಾವು!

Btv Kannada
Author: Btv Kannada

Read More